ಲೋಕೋಪಯೋಗಿ ಇಲಾಖೆ ಮೂಲಕ ₹600 ಕೋಟಿ ವೆಚ್ಚದಲ್ಲಿ 100 ಡಾ.ಬಿ.ಆರ್. ಅಂಬೇಡ್ಕರ್ ವಸತಿ ನಿಲಯಗಳ ನಿರ್ಮಾಣ, ಉತ್ತರ ಕನ್ನಡ ಜಿಲ್ಲೆಯ ಜಾಲಿ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನ ಪೂಂಜಾಲಕಟ್ಟೆ, ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ವಡ್ಡರ್ಸೆ ಹಾಗೂ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನ ಹಿರೇಶಕುನ ಗ್ರಾಮದಲ್ಲಿ ಒಟ್ಟು ₹72 ಕೋಟಿ ವೆಚ್ಚದಲ್ಲಿ ನಾರಾಯಣ ಗುರು ವಸತಿ ಶಾಲೆ ನಿರ್ಮಾಣಕ್ಕೆ ಒಪ್ಪಿಗದ ನೀಡಲಾಗಿದೆ ಎಂದರು.