‘ಸಾಮಾನ್ಯ ವರ್ಗದ ಆಕಾಂಕ್ಷಿಗಳು ಅರ್ಜಿ ಶುಲ್ಕದ ಜೊತೆಗೆ ₹ 2 ಲಕ್ಷದ ಡಿ.ಡಿ ಸಲ್ಲಿಸಬೇಕು. ಪರಿಶಿಷ್ಟರಿಗೆ ಡಿ.ಡಿಯಲ್ಲಿ ಶೇ 50ರಷ್ಟು ವಿನಾಯಿತಿ ನೀಡಲಾಗಿದೆ. ಹೀಗೆ ಸಂಗ್ರಹವಾಗುವ ಮೊತ್ತ ಕೆಪಿಸಿಸಿ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ. ಈ ಹಣವನ್ನುಪಕ್ಷದ ಕಟ್ಟಡ, ಪಕ್ಷದ ನಿಧಿ, ಚುನಾವಣಾ ಪ್ರಚಾರ, ಜಾಹೀರಾತು ನೀಡಲು ಬಳಸಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈಗಾಗಲೇ ಸ್ಪಷ್ಟಪಡಿಸಿದ್ದಾರೆ.