<p><strong>ಬೆಂಗಳೂರು</strong>: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಂತೋಷ್ ನಡುವಿನ ವೈಮನಸ್ಸನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.</p>.<p>‘ಅಧಿಕಾರದಲ್ಲಿ ಇದ್ದಾಗಲೆಲ್ಲ ಕಿರುಕುಳ ಕೊಟ್ಟು ಕೊನೆಗೆ ಅಧಿಕಾರದಿಂದ ಕೆಳಗಿಳಿಸಿದ 'ಸಂತೋಷ ಕೂಟ' ಈಗ ಮತ್ತೆ ಅಧಿಕಾರಕ್ಕೆ ಬರಲು ಯಡಿಯೂರಪ್ಪರನ್ನೇ ಮುಂದೆ ಬಿಟ್ಟು ಮರೆಯಲ್ಲಿ ಕುಳಿತಿರುವುದೇಕೆ? ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಆ ‘ಸಂತೋಷ’ಗೆ ಈಗ ಜನರ ಎದುರು ಬಂದು ಚುನಾವಣೆ ಎದುರಿಸುವ ಧೈರ್ಯ ಯಾಕಿಲ್ಲ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p><br />‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅವಕಾಶ ನೀಡಲಿಲ್ಲ. ರಾಜ್ಯ ಪ್ರವಾಹಕ್ಕೆ ತುತ್ತಾಗಿ ಯಡಿಯೂರಪ್ಪ ಏಕಾಂಗಿಯಾಗಿ ರಾಜ್ಯ ಸುತ್ತಬೇಕಾಯ್ತು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ‘ಸಂತೋಷ ಕೂಟ’ ಇದಕ್ಕೆ ಅಡ್ಡಿಯಾಗಿ ನಿಂತಿತ್ತು ಎಂದು ಕಾಂಗ್ರೆಸ್ ಕಿಡಿಕಾರಿದೆ.</p>.<p>ಇವನ್ನೂ ಓದಿ: <a href="https://cms.prajavani.net/karnataka-news/i-said-earlier-that-siddaramaiah-will-not-contest-from-kolar-assembly-constituency-said-bs-1024633.html" itemprop="url">ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲ್ಲವೆಂದು ಮೊದಲೇ ಹೇಳಿದ್ದೆ: ಯಡಿಯೂರಪ್ಪ </a></p>.<p> <a href="https://cms.prajavani.net/district/kolar/karnataka-assembly-elections-2023-kolar-assembly-constituency-siddaramaiah-k-srinivasa-gowda-1024621.html" itemprop="url">ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ನಿವೃತ್ತಿ: ಶಾಸಕ ಶ್ರೀನಿವಾಸಗೌಡ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.</p>.<p>ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಸಂತೋಷ್ ನಡುವಿನ ವೈಮನಸ್ಸನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಸರಣಿ ಟ್ವೀಟ್ ಮಾಡಿದೆ.</p>.<p>‘ಅಧಿಕಾರದಲ್ಲಿ ಇದ್ದಾಗಲೆಲ್ಲ ಕಿರುಕುಳ ಕೊಟ್ಟು ಕೊನೆಗೆ ಅಧಿಕಾರದಿಂದ ಕೆಳಗಿಳಿಸಿದ 'ಸಂತೋಷ ಕೂಟ' ಈಗ ಮತ್ತೆ ಅಧಿಕಾರಕ್ಕೆ ಬರಲು ಯಡಿಯೂರಪ್ಪರನ್ನೇ ಮುಂದೆ ಬಿಟ್ಟು ಮರೆಯಲ್ಲಿ ಕುಳಿತಿರುವುದೇಕೆ? ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿರುವ ಆ ‘ಸಂತೋಷ’ಗೆ ಈಗ ಜನರ ಎದುರು ಬಂದು ಚುನಾವಣೆ ಎದುರಿಸುವ ಧೈರ್ಯ ಯಾಕಿಲ್ಲ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p><br />‘ಆಪರೇಷನ್ ಕಮಲ’ದ ಮೂಲಕ ಬಿಜೆಪಿಯನ್ನು ಅಧಿಕಾರಕ್ಕೆ ತಂದ ಯಡಿಯೂರಪ್ಪಗೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಅವಕಾಶ ನೀಡಲಿಲ್ಲ. ರಾಜ್ಯ ಪ್ರವಾಹಕ್ಕೆ ತುತ್ತಾಗಿ ಯಡಿಯೂರಪ್ಪ ಏಕಾಂಗಿಯಾಗಿ ರಾಜ್ಯ ಸುತ್ತಬೇಕಾಯ್ತು. ಹೈಕಮಾಂಡ್ ಮಟ್ಟದಲ್ಲಿ ಪ್ರಭಾವಿಯಾಗಿರುವ ‘ಸಂತೋಷ ಕೂಟ’ ಇದಕ್ಕೆ ಅಡ್ಡಿಯಾಗಿ ನಿಂತಿತ್ತು ಎಂದು ಕಾಂಗ್ರೆಸ್ ಕಿಡಿಕಾರಿದೆ.</p>.<p>ಇವನ್ನೂ ಓದಿ: <a href="https://cms.prajavani.net/karnataka-news/i-said-earlier-that-siddaramaiah-will-not-contest-from-kolar-assembly-constituency-said-bs-1024633.html" itemprop="url">ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಲ್ಲವೆಂದು ಮೊದಲೇ ಹೇಳಿದ್ದೆ: ಯಡಿಯೂರಪ್ಪ </a></p>.<p> <a href="https://cms.prajavani.net/district/kolar/karnataka-assembly-elections-2023-kolar-assembly-constituency-siddaramaiah-k-srinivasa-gowda-1024621.html" itemprop="url">ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧಿಸದಿದ್ದರೆ ನಿವೃತ್ತಿ: ಶಾಸಕ ಶ್ರೀನಿವಾಸಗೌಡ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>