ಮಾಡಾಳ್ ಅವರ ಪುತ್ರ ಪ್ರಶಾಂತ್ ₹ 40 ಲಕ್ಷ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮಾಡಾಳ್ ಅವರು ಕ್ಷಮಿಸಲಾರದಂತಹ ಅಕ್ರಮ ಎಸಗಿ ತಪ್ಪು ಮಾಡಿದ್ದಾರೆ. ಹೀಗಾಗಿ ಅವರ ಬಂಧನ ಆಗಲೇಬೇಕು. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಮಾಡಾಳ್ ಪ್ರಕರಣ ಮುಚ್ಚಿಹಾಕುವ ಕೆಲಸ ಬಿಜೆಪಿ ಮಾಡುತ್ತಿಲ್ಲ’ ಎಂದರು.