ಗಜೇಂದ್ರಗಡ (ಗದಗ ಜಿಲ್ಲೆ): ರೋಣ ಮತಕ್ಷೇತ್ರದ ಶಾಸಕ ಕಳಕಪ್ಪ ಜಿ.ಬಂಡಿ ಅವರ ಚುನಾವಣಾ ವೆಚ್ಚಕ್ಕಾಗಿ ತಾಲ್ಲೂಕಿನ ಹಾಲಕೇರಿ ಗ್ರಾಮದ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು 210 ಕ್ವಿಂಟಲ್ ಕಡಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.
ಹಾಲಕೇರಿ ಗ್ರಾಮದಿಂದ ಐದು ಟ್ರ್ಯಾಕ್ಟರ್ಗಳಲ್ಲಿ ತಂದ ಕಡಲೆಯನ್ನು ಪಟ್ಟಣದ ಬಸ್ ನಿಲ್ದಾಣದಿಂದ ಮೆರವಣಿಗೆ ಮೂಲಕ ನೂರಾರು ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ನಡೆದ ಬಿಜೆಪಿಯ ‘ವಿಜಯ ಸಂಕಲ್ಪ ಯಾತ್ರೆ’ ವೇದಿಕೆ ಕಡೆಗೆ ತಂದರು.
ಮೆರವಣಿಗೆಗೆ ಡೊಳ್ಳು ಕುಣಿತ, ಸಂಗೀತ ವಾದ್ಯಗಳು ಮೆರುಗು ನೀಡಿದವು.