ಕಾಂಗ್ರೆಸ್ನ ಶೇ 40ಲಂಚ ಆರೋಪಕ್ಕೆ ಪ್ರತಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ಅರ್ಕಾವತಿ ಬಡಾವಣೆ ರೀಡೂ ಒಂದು ದೊಡ್ಡ ಹಗರಣ, ₹8,000 ಕೋಟಿಯ ಈ ಹಗರಣದ ಹಣ ಯಾರ ಜೇಬಿಗೆ ಹೋಗಿದೆ ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದ್ದರು. ಅಲ್ಲದೇ, ಈ ಹಗರಣದ ಆರೋಪಿಗಳನ್ನು ಜೈಲಿಗೆ ಕಳುಹಿಸುವುದಾಗಿಯೂ ವಿಧಾನಸಭೆಯಲ್ಲಿ ಹೇಳಿದ್ದರು.