<p><strong>ಬೆಂಗಳೂರು: </strong>ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. </p>.<p>ಪುತ್ತೂರಿನಲ್ಲಿ ಶನಿವಾರ ನಡೆದ ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರುಕಟ್ಟೆ ಮತ್ತು ಸಂಸ್ಕರಣೆ ಸಹಕಾರಿ ಸಂಸ್ಥೆ ‘ಕ್ಯಾಂಪ್ಕೊ’ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ, ‘ಗುಜರಾತ್ ಜನರು ಅಡಿಕೆ ತಿಂದರೆ, ದಕ್ಷಿಣ ಕನ್ನಡದ ಜನ ಅಡಿಕೆ ಬೆಳೆಯುತ್ತಾರೆ’ ಎಂದು ಹೇಳಿದ್ದರು. </p>.<p>ಅಮಿತ್ ಶಾ ಅವರು ಹೇಳಿಕೆ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ದಕ್ಷಿಣ ಕನ್ನಡದವರು ವಿಜಯ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ಗಳನ್ನು ಕಟ್ಟಿ ಬೆಳೆಸಿದರು. ಗುಜರಾತ್ನವರು ಈ ಬ್ಯಾಂಕ್ಗಳನ್ನು ನುಂಗಿ ನೀರು ಕುಡಿದರು. ನಮ್ಮವರಿಗೆ ಕಟ್ಟುವುದು, ಬೆಳೆಸುವುದು ಗೊತ್ತು, ನಿಮಗೆ ಮಾರುವುದು, ಮುಳುಗಿಸುವುದು ಮಾತ್ರ ಗೊತ್ತು’ ಎಂದು ಟ್ವೀಟ್ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. </p>.<p>ಪುತ್ತೂರಿನಲ್ಲಿ ಶನಿವಾರ ನಡೆದ ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರುಕಟ್ಟೆ ಮತ್ತು ಸಂಸ್ಕರಣೆ ಸಹಕಾರಿ ಸಂಸ್ಥೆ ‘ಕ್ಯಾಂಪ್ಕೊ’ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ, ‘ಗುಜರಾತ್ ಜನರು ಅಡಿಕೆ ತಿಂದರೆ, ದಕ್ಷಿಣ ಕನ್ನಡದ ಜನ ಅಡಿಕೆ ಬೆಳೆಯುತ್ತಾರೆ’ ಎಂದು ಹೇಳಿದ್ದರು. </p>.<p>ಅಮಿತ್ ಶಾ ಅವರು ಹೇಳಿಕೆ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ದಕ್ಷಿಣ ಕನ್ನಡದವರು ವಿಜಯ ಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ಗಳನ್ನು ಕಟ್ಟಿ ಬೆಳೆಸಿದರು. ಗುಜರಾತ್ನವರು ಈ ಬ್ಯಾಂಕ್ಗಳನ್ನು ನುಂಗಿ ನೀರು ಕುಡಿದರು. ನಮ್ಮವರಿಗೆ ಕಟ್ಟುವುದು, ಬೆಳೆಸುವುದು ಗೊತ್ತು, ನಿಮಗೆ ಮಾರುವುದು, ಮುಳುಗಿಸುವುದು ಮಾತ್ರ ಗೊತ್ತು’ ಎಂದು ಟ್ವೀಟ್ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>