ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ. ಕ.ದವರು ಬ್ಯಾಂಕ್ ಕಟ್ಟಿದರು, ಗುಜರಾತಿಗಳು ನುಂಗಿ ನೀರು ಕುಡಿದರು: ಸಿದ್ದು ಟೀಕೆ

Last Updated 12 ಫೆಬ್ರುವರಿ 2023, 9:05 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಿಧಾನಸಭೆ ವಿ‍ಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಪುತ್ತೂರಿನಲ್ಲಿ ಶನಿವಾರ ನಡೆದ ಕೇಂದ್ರ ಅಡಿಕೆ ಮತ್ತು ಕೊಕ್ಕೊ ಮಾರುಕಟ್ಟೆ ಮತ್ತು ಸಂಸ್ಕರಣೆ ಸಹಕಾರಿ ಸಂಸ್ಥೆ ‘ಕ್ಯಾಂಪ್ಕೊ’ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅಮಿತ್ ಶಾ, ‘ಗುಜರಾತ್‌ ಜನರು ಅಡಿಕೆ ತಿಂದರೆ, ದಕ್ಷಿಣ ಕನ್ನಡದ ಜನ ಅಡಿಕೆ ಬೆಳೆಯುತ್ತಾರೆ’ ಎಂದು ಹೇಳಿದ್ದರು.

ಅಮಿತ್ ಶಾ ಅವರು ಹೇಳಿಕೆ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ‘ದಕ್ಷಿಣ ಕನ್ನಡದವರು ವಿಜಯ ಬ್ಯಾಂಕ್‌, ಸಿಂಡಿಕೇಟ್ ಬ್ಯಾಂಕ್‌ಗಳನ್ನು ಕಟ್ಟಿ ಬೆಳೆಸಿದರು. ಗುಜರಾತ್‌ನವರು ಈ ಬ್ಯಾಂಕ್‌ಗಳನ್ನು ನುಂಗಿ ನೀರು ಕುಡಿದರು. ನಮ್ಮವರಿಗೆ ಕಟ್ಟುವುದು, ಬೆಳೆಸುವುದು ಗೊತ್ತು, ನಿಮಗೆ ಮಾರುವುದು, ಮುಳುಗಿಸುವುದು ಮಾತ್ರ ಗೊತ್ತು’ ಎಂದು ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT