ಅಲ್ಲದೇ, ಒಂದೇ ಸ್ಥಳದಲ್ಲಿ ಮೂರು ವರ್ಷ ಸೇವೆ ಪೂರ್ಣಗೊಳಿಸಿರುವ ಅಧಿಕಾರಿಗಳು ಮತ್ತು ತವರು ಜಿಲ್ಲೆಗಳಲ್ಲಿ ಇರುವವರನ್ನು ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು. ಆಡಳಿತ ಪಕ್ಷದಿಂದ ಸಾಮಾಜಿಕ ಮಾಧ್ಯಮಗಳ ದುರುಪಯೋಗ ತಡೆಯಲು ಕ್ರಮ ತೆಗೆದುಕೊಳ್ಳಬೇಕು. ಇದರ ಮೇಲೆ ನಿಗಾ ಇಡಲು ಪಾರದರ್ಶಕವಾದ ಸಮಿತಿಯೊಂದನ್ನು ರಚಿಸಬೇಕು. ಸಾಮಾಜಿಕ ಮಾಧ್ಯಮದ ವೆಚ್ಚವನ್ನು ಅಭ್ಯರ್ಥಿಯ ವೆಚ್ಚಕ್ಕೆ ಸೇರಿಸಬೇಕು ಎಂದು ಮನವಿಯಲ್ಲಿ ತಿಳಿಸಿದೆ.