ಜನಾರ್ದನ ರೆಡ್ಡಿ ಗೈರು ಹಾಜರಿಯಲ್ಲಿ ಅವರ ಪತ್ನಿ ಲಕ್ಷ್ಮಿ ಅರುಣಾ ನೇತೃತ್ವದಲ್ಲಿ ಹವಂಬಾವಿ ಹೆಲಿಪ್ಯಾಡ್ನಲ್ಲಿ ಬುಧವಾರ ನಡೆದ ಕಾರ್ಯಕರ್ತರ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಜನ್ಮಭೂಮಿ, ಕರ್ಮ ಭೂಮಿ, ಪುಣ್ಯ ಭೂಮಿಯಿಂದ ದೂರ ಆಗಬೇಕಾದ ಪರಿಸ್ಥಿತಿ ಬೇರೆ ಯಾರಿಗೂ ಬಾರದಿರಲಿ. ರೆಡ್ಡಿ ಸಚಿವರಾಗಿ ಮಾಡಿದ ಕೆಲಸ ಸ್ಮರಣೀಯ. ಆನಂತರ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಚಾಗನೂರು ವಿಮಾನ ನಿಲ್ದಾಣ ತನ್ನ ತಂದೆ ಕನಸು. ಅದು ನನೆಗುದಿಗೆ ಬಿದ್ದಿದೆ’ ಎಂದೂ ಬ್ರಾಹ್ಮಿಣಿ ಹೇಳಿದರು.