ಸಿದ್ದರಾಮಯ್ಯ ಅವರು ಶುಕ್ರವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಗೈರಾಗಿದ್ದರು. ಇದೇ ವಿಚಾರಕ್ಕೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯನವರೇ, ಕಲ್ಬುರ್ಗಿಯಲ್ಲಿ ಖಾಲಿ ಕುರ್ಚಿಗಳಿಗೆ ಸುಳ್ಳಿನ ತುತ್ತೂರಿ ಊದುವ ಬದಲು ಅಧಿವೇಶನಕ್ಕೆ ಹಾಜರಾಗುವುದು ಸೂಕ್ತವಲ್ಲವೇ. ಅಂದ ಹಾಗೆ ರಾಜ್ಯದಲ್ಲಿ ಕಾಂಗ್ರೆಸ್ ತಿರಸ್ಕೃತಗೊಂಡಿರುವ ಬಗ್ಗೆ ಸಾಕ್ಷಿ ಕಲೆಹಾಕಲು ಯಾತ್ರೆ ನಡೆಸಬೇಕೆಂದಿರಲಿಲ್ಲ’ ಎಂದು ಲೇವಡಿ ಮಾಡಿದೆ.