<p><strong>ಬೆಂಗಳೂರು:</strong> 16ನೇ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ.</p>.<p>ಅಭ್ಯರ್ಥಿಗಳಿಗೆ ಹಾಗೂ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ನೀತಿ ಸಂಹಿತೆಯ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ಫಲಿತಾಂಶ ಬಂದು ಹೊಸ ಸರ್ಕಾರ ರಚನೆಯಾಗುವವರೆಗೆ ಈ ಸಂಹಿತೆಗಳು ಜಾರಿಯಲ್ಲಿರಲಿವೆ.</p>.<p><strong>ಸಾಮಾನ್ಯ ಸಂಹಿತೆಗಳು</strong></p>.<p>1. ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು ಧರ್ಮ, ಜಾತಿ, ಭಾಷೆ ಹಾಗೂ ಸಮುಯದಾಯಗಳ ನಡುವೆ ದ್ವೇಷ ಉಂಟು ಮಾಡುವಂಥ ಯಾವುದೇ ಚಟುವಟಿಕೆಯಲ್ಲಿ ಭಾಗಿಯಾಗುವಂತಿಲ್ಲ.</p>.<p>2. ವಿರುದ್ಧ ಪಕ್ಷಗಳ ನೀತಿ ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾತ್ರ ಟೀಕೆ ಮಾಡಬೇಕು. ವೈಯಕ್ತಿಕ ಟೀಕೆ ಸಲ್ಲ. </p>.<p>3. ಜಾತಿ, ಧರ್ಮದ ಆಧಾರದಲ್ಲಿ ಮತ ಪಡೆಯುವ ಮನವಿ ಮಾಡಬಾರದು. ಮಂದಿರ, ಮಸೀದಿ, ಇಗರ್ಜ್ ಸೇರಿ ಧಾರ್ಮಿಕ ಸ್ಥಳಗಳನ್ನು ಪ್ರಚಾರಕ್ಕೆ ಬಳಸಕೂಡದು.</p>.<p>4. ಭ್ರಷ್ಟ ಚಟುವಟಿಕೆಯಲ್ಲಿ ಪಕ್ಷ ಹಾಗೂ ಅಭ್ಯರ್ಥಿಗಳು ತೊಡಗಿಸಿಕೊಳ್ಳುವಂತಿಲ್ಲ.</p>.<p>5. ಅನುಮತಿ ಇಲ್ಲದೆ ಯಾರದೇ ವೈಯಕ್ತಿಕ ಸ್ವತ್ತುಗಳನ್ನು ಬಳಕೆ ಮಾಡುವಂತಿಲ್ಲ.</p>.<p>6. ಒಂದು ಪಕ್ಷದ ಕಾರ್ಯಕ್ರಮಕ್ಕೆ ಇನ್ನೊಂದು ಪಕ್ಷಗಳ ಕಾರ್ಯಕರ್ತರು ಅಡ್ಡಿಪಡಿಸುವಂತಿಲ್ಲ.</p>.<p><br /><u><strong>ಸಭೆ</strong></u></p>.<p>1. ಸಭೆ ನಡೆಸುವುದಕ್ಕೂ ಮುನ್ನ ಸಭೆಯ ಸಮಯ ಹಾಗೂ ಸ್ಥಳವನ್ನು ಸ್ಥಳೀಯ ಪೊಲೀಸರಿಗೆ ಅಭ್ಯರ್ಥಿ ಅಥವಾ ಪಕ್ಷ ತಿಳಿಸತಕ್ಕದ್ದು.</p>.<p>2. ಸಭೆ ನಡೆಸಲು ಉದ್ದೇಶಿಸರುವ ಸ್ಥಳದಲ್ಲಿ ಯಾವುದೇ ನಿರ್ಬಂಧಕ ಆಜ್ಞೆಗಳು ಇಲ್ಲ ಎನ್ನುವುದನ್ನು ಅಭ್ಯರ್ಥಿ ಯಾ ಪಕ್ಷ ಖಚಿತ ಪಡಿಸಿಕೊಳ್ಳುವುದು.</p>.<p>3. ಒಂದು ವೇಳೆ ಸಭೆಯಲ್ಲಿ ಲೌಡ್ ಸ್ಪೀಕರ್ ಬಳಸುವುದಿದ್ದರೆ ಸಂಬಂಧಪಟ್ಟ ಇಲಾಖೆಯಿಂದ ಮುಂಚಿತವಾಗಿ ಅನುಮತಿ ಪಡೆದುಕೊಳ್ಳುವುದು.</p>.<p>4. ಸಭೆಯ ಸ್ಥಳದಲ್ಲಿ ಯಾರಾದರೂ ತೊಂದರೆ ಕೊಡುತ್ತಿದ್ದರೆ, ಸ್ಥಳದಲ್ಲಿರುವ ಪೊಲೀಸರ ಸಹಾಯ ಪಡೆಯುವುದು.</p>.<p><br /><u><strong>ಮೆರವಣಿಗೆ</strong></u></p>.<p>1. ಮೆರವಣಿಗೆ ಆಯೋಜಿಸುವ ಪಕ್ಷ ಯಾ ಅಭ್ಯರ್ಥಿ, ಮೆರವಣಿಗೆ ಆರಂಭವಾಗುವ ಸ್ಥಳ, ಸಮಯ, ಸಾಗುವ ಹಾದಿ, ಕೊನೆಗೊಳ್ಳುವ ಸಮಯದ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿ, ಅನುಮತಿ ಪಡೆಯವುದು.</p>.<p>2. ಮೆರವಣಿಗೆ ಸಾಗುವಾಗ ಸ್ಥಳೀಯ ನೀತಿ ನಿಯಮಗಳನ್ನು ಪಾಲಿಸುವುದು. ಸಂಚಾರ ನಿಯಮಗಳನ್ನು ಪಾಲಿಸುವುದು.</p>.<p>3. ರಸ್ತೆಯ ಬಲಭಾಗದಲ್ಲಿ ಮೆರವಣಿಗೆ ನಡೆಸುವುದು. ಪೊಲೀಸ್ ಸೂಚನೆಗಳನ್ನು ಪಾಲಿಸುವುದು.</p>.<p>4. ಒಂದು ವೇಳೆ ಎರಡು ಪಕ್ಷಗಳು ಒಂದೇ ಸಮಯದಲ್ಲಿ, ಒಂದೇ ಸ್ಥಳದಲ್ಲಿ ಮೆರವಣಿಗೆ ಮಾಡುವುದಿದ್ದರೆ, ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು. ಅದಕ್ಕಾಗಿ ಬೇಗನೇ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸುವುದು.</p>.<p>5. ಮೆರವಣಿಗೆ ವೇಳೆ ಅನಪೇಕ್ಷಿತ ಉಪಕರಣಗಳನ್ನು ಬಳಕೆ ಮಾಡದಿರುವುದು.</p>.<p>6. ಇತರ ರಾಜಕೀಯ ಸದಸ್ಯರನ್ನು ಪ್ರತಿನಿಧಿಸುವ ಪ್ರತಿಮೆಗಳನ್ನು ಒಯ್ಯುವುದು, ಪಕ್ಷಗಳು ಅಥವಾ ಅವರ ನಾಯಕರು, ಅಂತಹ ಪ್ರತಿಕೃತಿಗಳನ್ನು ಸಾರ್ವಜನಿಕವಾಗಿ ಮತ್ತು ಇತರ ರೂಪಗಳಲ್ಲಿ ಸುಡುವುದು ಮಾಡಕೂಡದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> 16ನೇ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದೆ.</p>.<p>ಅಭ್ಯರ್ಥಿಗಳಿಗೆ ಹಾಗೂ ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗವು ನೀತಿ ಸಂಹಿತೆಯ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ಫಲಿತಾಂಶ ಬಂದು ಹೊಸ ಸರ್ಕಾರ ರಚನೆಯಾಗುವವರೆಗೆ ಈ ಸಂಹಿತೆಗಳು ಜಾರಿಯಲ್ಲಿರಲಿವೆ.</p>.<p><strong>ಸಾಮಾನ್ಯ ಸಂಹಿತೆಗಳು</strong></p>.<p>1. ಯಾವುದೇ ಪಕ್ಷಗಳು ಅಥವಾ ಅಭ್ಯರ್ಥಿಗಳು ಧರ್ಮ, ಜಾತಿ, ಭಾಷೆ ಹಾಗೂ ಸಮುಯದಾಯಗಳ ನಡುವೆ ದ್ವೇಷ ಉಂಟು ಮಾಡುವಂಥ ಯಾವುದೇ ಚಟುವಟಿಕೆಯಲ್ಲಿ ಭಾಗಿಯಾಗುವಂತಿಲ್ಲ.</p>.<p>2. ವಿರುದ್ಧ ಪಕ್ಷಗಳ ನೀತಿ ಹಾಗೂ ಕಾರ್ಯಕ್ರಮಗಳ ಬಗ್ಗೆ ಮಾತ್ರ ಟೀಕೆ ಮಾಡಬೇಕು. ವೈಯಕ್ತಿಕ ಟೀಕೆ ಸಲ್ಲ. </p>.<p>3. ಜಾತಿ, ಧರ್ಮದ ಆಧಾರದಲ್ಲಿ ಮತ ಪಡೆಯುವ ಮನವಿ ಮಾಡಬಾರದು. ಮಂದಿರ, ಮಸೀದಿ, ಇಗರ್ಜ್ ಸೇರಿ ಧಾರ್ಮಿಕ ಸ್ಥಳಗಳನ್ನು ಪ್ರಚಾರಕ್ಕೆ ಬಳಸಕೂಡದು.</p>.<p>4. ಭ್ರಷ್ಟ ಚಟುವಟಿಕೆಯಲ್ಲಿ ಪಕ್ಷ ಹಾಗೂ ಅಭ್ಯರ್ಥಿಗಳು ತೊಡಗಿಸಿಕೊಳ್ಳುವಂತಿಲ್ಲ.</p>.<p>5. ಅನುಮತಿ ಇಲ್ಲದೆ ಯಾರದೇ ವೈಯಕ್ತಿಕ ಸ್ವತ್ತುಗಳನ್ನು ಬಳಕೆ ಮಾಡುವಂತಿಲ್ಲ.</p>.<p>6. ಒಂದು ಪಕ್ಷದ ಕಾರ್ಯಕ್ರಮಕ್ಕೆ ಇನ್ನೊಂದು ಪಕ್ಷಗಳ ಕಾರ್ಯಕರ್ತರು ಅಡ್ಡಿಪಡಿಸುವಂತಿಲ್ಲ.</p>.<p><br /><u><strong>ಸಭೆ</strong></u></p>.<p>1. ಸಭೆ ನಡೆಸುವುದಕ್ಕೂ ಮುನ್ನ ಸಭೆಯ ಸಮಯ ಹಾಗೂ ಸ್ಥಳವನ್ನು ಸ್ಥಳೀಯ ಪೊಲೀಸರಿಗೆ ಅಭ್ಯರ್ಥಿ ಅಥವಾ ಪಕ್ಷ ತಿಳಿಸತಕ್ಕದ್ದು.</p>.<p>2. ಸಭೆ ನಡೆಸಲು ಉದ್ದೇಶಿಸರುವ ಸ್ಥಳದಲ್ಲಿ ಯಾವುದೇ ನಿರ್ಬಂಧಕ ಆಜ್ಞೆಗಳು ಇಲ್ಲ ಎನ್ನುವುದನ್ನು ಅಭ್ಯರ್ಥಿ ಯಾ ಪಕ್ಷ ಖಚಿತ ಪಡಿಸಿಕೊಳ್ಳುವುದು.</p>.<p>3. ಒಂದು ವೇಳೆ ಸಭೆಯಲ್ಲಿ ಲೌಡ್ ಸ್ಪೀಕರ್ ಬಳಸುವುದಿದ್ದರೆ ಸಂಬಂಧಪಟ್ಟ ಇಲಾಖೆಯಿಂದ ಮುಂಚಿತವಾಗಿ ಅನುಮತಿ ಪಡೆದುಕೊಳ್ಳುವುದು.</p>.<p>4. ಸಭೆಯ ಸ್ಥಳದಲ್ಲಿ ಯಾರಾದರೂ ತೊಂದರೆ ಕೊಡುತ್ತಿದ್ದರೆ, ಸ್ಥಳದಲ್ಲಿರುವ ಪೊಲೀಸರ ಸಹಾಯ ಪಡೆಯುವುದು.</p>.<p><br /><u><strong>ಮೆರವಣಿಗೆ</strong></u></p>.<p>1. ಮೆರವಣಿಗೆ ಆಯೋಜಿಸುವ ಪಕ್ಷ ಯಾ ಅಭ್ಯರ್ಥಿ, ಮೆರವಣಿಗೆ ಆರಂಭವಾಗುವ ಸ್ಥಳ, ಸಮಯ, ಸಾಗುವ ಹಾದಿ, ಕೊನೆಗೊಳ್ಳುವ ಸಮಯದ ಬಗ್ಗೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿ, ಅನುಮತಿ ಪಡೆಯವುದು.</p>.<p>2. ಮೆರವಣಿಗೆ ಸಾಗುವಾಗ ಸ್ಥಳೀಯ ನೀತಿ ನಿಯಮಗಳನ್ನು ಪಾಲಿಸುವುದು. ಸಂಚಾರ ನಿಯಮಗಳನ್ನು ಪಾಲಿಸುವುದು.</p>.<p>3. ರಸ್ತೆಯ ಬಲಭಾಗದಲ್ಲಿ ಮೆರವಣಿಗೆ ನಡೆಸುವುದು. ಪೊಲೀಸ್ ಸೂಚನೆಗಳನ್ನು ಪಾಲಿಸುವುದು.</p>.<p>4. ಒಂದು ವೇಳೆ ಎರಡು ಪಕ್ಷಗಳು ಒಂದೇ ಸಮಯದಲ್ಲಿ, ಒಂದೇ ಸ್ಥಳದಲ್ಲಿ ಮೆರವಣಿಗೆ ಮಾಡುವುದಿದ್ದರೆ, ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳುವುದು. ಅದಕ್ಕಾಗಿ ಬೇಗನೇ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸುವುದು.</p>.<p>5. ಮೆರವಣಿಗೆ ವೇಳೆ ಅನಪೇಕ್ಷಿತ ಉಪಕರಣಗಳನ್ನು ಬಳಕೆ ಮಾಡದಿರುವುದು.</p>.<p>6. ಇತರ ರಾಜಕೀಯ ಸದಸ್ಯರನ್ನು ಪ್ರತಿನಿಧಿಸುವ ಪ್ರತಿಮೆಗಳನ್ನು ಒಯ್ಯುವುದು, ಪಕ್ಷಗಳು ಅಥವಾ ಅವರ ನಾಯಕರು, ಅಂತಹ ಪ್ರತಿಕೃತಿಗಳನ್ನು ಸಾರ್ವಜನಿಕವಾಗಿ ಮತ್ತು ಇತರ ರೂಪಗಳಲ್ಲಿ ಸುಡುವುದು ಮಾಡಕೂಡದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>