ಸಮಾವೇಶದಲ್ಲಿ ಮಾತನಾಡಿದ ಅವರು, ‘ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿರಿ. ಅಲ್ಲಿಗೆ 18 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಅದರ ಬದಲಾಗಿ, ಲಕ್ಷಾಂತರ ಯವಜನರು ಉದ್ಯೋಗ ಅರಸಿ ವಲಸೆ ಹೋಗುವಂತಾಗಿದೆ. ದೇಶದಲ್ಲಿ 60 ಲಕ್ಷಕ್ಕೂ ಅಧಿಕ ಸಣ್ಣ ಕೈಗಾರಿಕೆಗಳು ಮುಚ್ಚಿಹೋಗಿವೆ’ ಎಂದು ವಾಗ್ದಾಳಿ ನಡೆಸಿದರು.