ಬೆಂಗಳೂರು: ರಾಜ್ಯದಲ್ಲಿ ಪಕ್ಷದ ಬಲವರ್ಧನೆಗೆ ರಾಜ್ಯ ಮತ್ತು ರಾಷ್ಟ್ರೀಯ ನಾಯಕರನ್ನು ಒಳಗೊಂಡ ತಂಡವು ಏ. 12 ರಿಂದ 24 ರವರೆಗೆ ಮೂರು ತಂಡಗಳಲ್ಲಿ ಪ್ರವಾಸ ನಡೆಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸುರಾನ ತಿಳಿಸಿದ್ದಾರೆ.
ಈ ತಂಡಗಳು ವಿಭಾಗ ಕೇಂದ್ರದಲ್ಲಿ ಎರಡು ದಿನಗಳ ಕಾರ್ಯಕ್ರಮ ಸಂಘಟಿಸಲಿವೆ. ಪ್ರತಿ ಜಿಲ್ಲಾ ಕೇಂದ್ರದಲ್ಲೂ ಕೋರ್ ಕಮಿಟಿ ಸಭೆ ನಡೆಯಲಿದೆ. ನಂತರ ಆಯಾ ಜಿಲ್ಲಾ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಅಲ್ಲದೆ, ಜಿಲ್ಲೆಯ ಪ್ರಮುಖರೊಂದಿಗೆ ವೈಯಕ್ತಿಕ ಮಾತುಕತೆ ಏರ್ಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.