<p><strong>ಬೆಳಗಾವಿ (ಸುವರ್ಣ ವಿಧಾನಸೌಧ)</strong>: ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಸಲು ₹ 25 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮಂಗಳವಾರ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಸಹ ಸದಸ್ಯ ಶರತ್ ಬಚ್ಚೇಗೌಡ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ’1996ರಲ್ಲಿ ಯೋಜನೆಗಾಗಿ ಕೆಪಿಸಿಎಲ್ ಯೋಜನಾ ವರದಿ ತಯಾರಿಸಿತ್ತು. ಬಳಿಕ ಹಲವು ಬದಲಾವಣೆ ಮಾಡಲಾಗಿತ್ತು. ವಿಸ್ತೃತ ಯೋಜನಾ ವರದಿ ತಯಾರಿಗೆ 5 ವರ್ಷ ತೆಗೆದುಕೊಳ್ಳಲಾಗಿತ್ತು. ಜಾಗತಿಕ ಟೆಂಡರ್ ಕರೆಯಲಾಗಿತ್ತು. ಬಳಿಕ ಕೈಬಿಡಲಾಗಿತ್ತು. ಕೊನೆಗೆ ಸ್ಥಳೀಯ ಹಂತದಲ್ಲೇ ಟೆಂಡರ್ ಕರೆಯಲಾಗಿತ್ತು‘ ಎಂದರು.</p>.<p>ಯೋಜನೆಗೆ ಅನುಮೋದನೆ ನೀಡುವ ಸಂಬಂಧ ಕೇಂದ್ರ ಜಲ ಆಯೋಗದಲ್ಲಿ ಹಿಂದೆ ಎರಡು ಸಭೆಗಳು ನಡೆದಿವೆ. ಮುಂದಿನ ಸಭೆಯಲ್ಲಿ ಅನುಮೋದನೆ ಸಿಗುವ ನಿರೀಕ್ಷೆ ಇದೆ. ಪರಿಸರ ಅನುಮೋದನೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳ್ಳುವ ವಿಶ್ವಾಸ ಇದೆ. ಈ ಎರಡು ಒಪ್ಪಿಗೆ ಸಿಕ್ಕ ಬಳಿಕ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಶರತ್ ಬಚ್ಚೇಗೌಡ ಪ್ರಶ್ನೆ ಕೇಳಿದಾಗ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ’ಇದೊಂದು ಸೂಕ್ಷ್ಮ ವಿಚಾರ. ಇಲ್ಲಿ ಹೆಚ್ಚು ಚರ್ಚೆ ನಡೆಸುವುದು ಬೇಡ‘ ಎಂದು ಕೋರಿದರು.</p>.<p>ಕಾಂಗ್ರೆಸ್ನ ಕೃಷ್ಣ ಬೈರೇಗೌಡ, ’ಯೋಜನೆಯ ಅನುಷ್ಠಾನದಲ್ಲಿ ವಿಳಂಬ ಆಗುತ್ತಿದೆ. ಯೋಜನೆಗೆ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಅರ್ಜಿ ಹಾಕಿ ಕುಳಿತರೆ ಕೆಲಸ ಆಗುತ್ತದೆಯೇ‘ ಎಂದು ಪ್ರಶ್ನಿಸಿದರು.</p>.<p>ಗೋವಿಂದ ಕಾರಜೋಳ, ‘ಈ ಹಿಂದಿನ ಜಲಸಂಪನ್ಮೂಲ ಸಚಿವರೊಬ್ಬರು ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಚೆನ್ನೈಯ ಹಸಿರು ನ್ಯಾಯಮಂಡಳಿ ಪೀಠ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ದೆಹಲಿ ಪೀಠದಲ್ಲಿ ಅರ್ಜಿ ಸಲ್ಲಿಸಿ ಪ್ರಕರಣ ತೆರವು ಮಾಡಿದೆವು. ಈ ರೀತಿ ಸ್ಥಿತಿ ಇದೆ’ ಎಂದು ಗಮನ ಸೆಳೆದರು.</p>.<p>ಕಾಂಗ್ರೆಸ್ನ ಡಿ.ಕೆ.ಶಿವಕುಮಾರ್, ’ಸುಪ್ರೀಂ ಕೋರ್ಟ್ ನಮ್ಮ ಪರ ತೀರ್ಪು ನೀಡಿದೆ. ಪರಿಸರ ಅನುಮೋದನೆ ಪಡೆಯುವುದು ಸರ್ಕಾರದ ಜವಾಬ್ದಾರಿ. ನಮ್ಮ ಹಣ, ನಮ್ಮ ಯೋಜನೆ. ಹೀಗಾಗಿ, ಅನುಷ್ಠಾನ ಮಾಡಲೇಬೇಕು. ಶೀಘ್ರ ಭೂಮಿ ಪೂಜೆ ಮಾಡಬೇಕು.ಈ ಹಿಂದೆ ಯೋಜನಾ ಮೊತ್ತ ₹4 ಸಾವಿರ ಕೋಟಿ ಇತ್ತು. ಈಗ ₹9 ಸಾವಿರ ಕೋಟಿಗೆ ಏರಿದೆ. ಮುಂದಿನ ದಿನಗಳಲ್ಲಿ ₹18 ಸಾವಿರ ಕೋಟಿ ಆಗಲಿದೆ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ (ಸುವರ್ಣ ವಿಧಾನಸೌಧ)</strong>: ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಸಲು ₹ 25 ಕೋಟಿ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಮಂಗಳವಾರ ತಿಳಿಸಿದರು.</p>.<p>ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಸಹ ಸದಸ್ಯ ಶರತ್ ಬಚ್ಚೇಗೌಡ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ’1996ರಲ್ಲಿ ಯೋಜನೆಗಾಗಿ ಕೆಪಿಸಿಎಲ್ ಯೋಜನಾ ವರದಿ ತಯಾರಿಸಿತ್ತು. ಬಳಿಕ ಹಲವು ಬದಲಾವಣೆ ಮಾಡಲಾಗಿತ್ತು. ವಿಸ್ತೃತ ಯೋಜನಾ ವರದಿ ತಯಾರಿಗೆ 5 ವರ್ಷ ತೆಗೆದುಕೊಳ್ಳಲಾಗಿತ್ತು. ಜಾಗತಿಕ ಟೆಂಡರ್ ಕರೆಯಲಾಗಿತ್ತು. ಬಳಿಕ ಕೈಬಿಡಲಾಗಿತ್ತು. ಕೊನೆಗೆ ಸ್ಥಳೀಯ ಹಂತದಲ್ಲೇ ಟೆಂಡರ್ ಕರೆಯಲಾಗಿತ್ತು‘ ಎಂದರು.</p>.<p>ಯೋಜನೆಗೆ ಅನುಮೋದನೆ ನೀಡುವ ಸಂಬಂಧ ಕೇಂದ್ರ ಜಲ ಆಯೋಗದಲ್ಲಿ ಹಿಂದೆ ಎರಡು ಸಭೆಗಳು ನಡೆದಿವೆ. ಮುಂದಿನ ಸಭೆಯಲ್ಲಿ ಅನುಮೋದನೆ ಸಿಗುವ ನಿರೀಕ್ಷೆ ಇದೆ. ಪರಿಸರ ಅನುಮೋದನೆ ಪ್ರಕ್ರಿಯೆ ಶೀಘ್ರ ಪೂರ್ಣಗೊಳ್ಳುವ ವಿಶ್ವಾಸ ಇದೆ. ಈ ಎರಡು ಒಪ್ಪಿಗೆ ಸಿಕ್ಕ ಬಳಿಕ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಭರವಸೆ ನೀಡಿದರು.</p>.<p>ಶರತ್ ಬಚ್ಚೇಗೌಡ ಪ್ರಶ್ನೆ ಕೇಳಿದಾಗ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ’ಇದೊಂದು ಸೂಕ್ಷ್ಮ ವಿಚಾರ. ಇಲ್ಲಿ ಹೆಚ್ಚು ಚರ್ಚೆ ನಡೆಸುವುದು ಬೇಡ‘ ಎಂದು ಕೋರಿದರು.</p>.<p>ಕಾಂಗ್ರೆಸ್ನ ಕೃಷ್ಣ ಬೈರೇಗೌಡ, ’ಯೋಜನೆಯ ಅನುಷ್ಠಾನದಲ್ಲಿ ವಿಳಂಬ ಆಗುತ್ತಿದೆ. ಯೋಜನೆಗೆ ಅನುಮತಿ ಪಡೆಯಲು ಅರ್ಜಿ ಸಲ್ಲಿಸಿ ರಾಜ್ಯ ಸರ್ಕಾರ ಸುಮ್ಮನೆ ಕುಳಿತಿದೆ. ಅರ್ಜಿ ಹಾಕಿ ಕುಳಿತರೆ ಕೆಲಸ ಆಗುತ್ತದೆಯೇ‘ ಎಂದು ಪ್ರಶ್ನಿಸಿದರು.</p>.<p>ಗೋವಿಂದ ಕಾರಜೋಳ, ‘ಈ ಹಿಂದಿನ ಜಲಸಂಪನ್ಮೂಲ ಸಚಿವರೊಬ್ಬರು ಯೋಜನಾ ಪ್ರದೇಶಕ್ಕೆ ಭೇಟಿ ನೀಡಿದ್ದಕ್ಕೆ ಚೆನ್ನೈಯ ಹಸಿರು ನ್ಯಾಯಮಂಡಳಿ ಪೀಠ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿತ್ತು. ದೆಹಲಿ ಪೀಠದಲ್ಲಿ ಅರ್ಜಿ ಸಲ್ಲಿಸಿ ಪ್ರಕರಣ ತೆರವು ಮಾಡಿದೆವು. ಈ ರೀತಿ ಸ್ಥಿತಿ ಇದೆ’ ಎಂದು ಗಮನ ಸೆಳೆದರು.</p>.<p>ಕಾಂಗ್ರೆಸ್ನ ಡಿ.ಕೆ.ಶಿವಕುಮಾರ್, ’ಸುಪ್ರೀಂ ಕೋರ್ಟ್ ನಮ್ಮ ಪರ ತೀರ್ಪು ನೀಡಿದೆ. ಪರಿಸರ ಅನುಮೋದನೆ ಪಡೆಯುವುದು ಸರ್ಕಾರದ ಜವಾಬ್ದಾರಿ. ನಮ್ಮ ಹಣ, ನಮ್ಮ ಯೋಜನೆ. ಹೀಗಾಗಿ, ಅನುಷ್ಠಾನ ಮಾಡಲೇಬೇಕು. ಶೀಘ್ರ ಭೂಮಿ ಪೂಜೆ ಮಾಡಬೇಕು.ಈ ಹಿಂದೆ ಯೋಜನಾ ಮೊತ್ತ ₹4 ಸಾವಿರ ಕೋಟಿ ಇತ್ತು. ಈಗ ₹9 ಸಾವಿರ ಕೋಟಿಗೆ ಏರಿದೆ. ಮುಂದಿನ ದಿನಗಳಲ್ಲಿ ₹18 ಸಾವಿರ ಕೋಟಿ ಆಗಲಿದೆ ಎಂದೂ ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>