ವಿರೋಧ ಪಕ್ಷಗಳ ಸದಸ್ಯರ ಆಕ್ಷೇಪಗಳಿಗೆ ಮತ್ತು ಸಂದೇಹಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದರು. ಆದರೆ, ‘ಈ ಮಸೂದೆ ಜನವಿರೋಧಿಯಾಗಿದೆ’ ಎಂದು ಆರೋಪಿಸಿ ಸದಸ್ಯರು ಸಭಾತ್ಯಾಗ ಮಾಡಿದರು. ‘ಮಸೂದೆ ಜನವಿರೋಧಿ ಅಲ್ಲ. ಅಪರಾಧಿಗಳ ವಿರೋಧಿ. ವಿರೋಧ ಪಕ್ಷದವರು ಅಪರಾಧಿಗಳ ಪರ ಸಭಾತ್ಯಾಗ ನಡೆಸುತ್ತಿದ್ದಾರೆ’ ಎಂದು ಬಿಜೆಪಿ ಸದಸ್ಯರು ತಿರುಗೇಟು ನೀಡಿದರು.