<p><strong>ಬೆಳಗಾವಿ(ಸುವರ್ಣ ವಿಧಾನಸೌಧ):</strong> ವಿವಿಧ ಕುಡಿಯುವ ನೀರಿನ ಯೋಜನೆಗಳು ಮತ್ತು ನೀರಾವರಿ ಯೋಜನೆಗಳಿಗೆ ₹1,332.21 ಕೋಟಿ ಅನುದಾನ ಒದಗಿಸಲು ಸೋಮವಾರ ಇಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಜಲ್ ಜೀವನ್ ಮಿಷನ್ ಯೋಜನೆಯಡಿ ಹಾವೇರಿ ಜಿಲ್ಲೆಯ ಸವಣೂರು, ಶಿಗ್ಗಾವಿ, ಹಾನಗಲ್ ಮತ್ತು ಹಾವೇರಿ ತಾಲ್ಲೂಕಿನ 285 ಗ್ರಾಮಗಳ (291 ಜನವಸತಿಗಳಿಗೆ), ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ₹645 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಮೂಲಗಳು ತಿಳಿಸಿವೆ.</p>.<p>ಆಲಮಟ್ಟಿ ಎಡದಂಡೆ ಕಾಲುವೆ ಕಿ.ಮೀ 0.00 ರಿಂದ 68.24 ವರೆಗಿನ (ಬಾಕಿ ಉಳಿದ) ಕಾಲುವೆ ಜಾಲದ ಹಾಗೂ ವಿತರಣಾ ಕಾಲುವೆಗಳ ಸ್ಟ್ರಕ್ಚರ್ ಒಳಗೊಂಡಂತೆ ಆಧುನೀಕರಣ ಕಾಮಗಾರಿಗಳನ್ನು ₹75,41 ಕೋಟಿ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.</p>.<p>ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಕಾಗಿಣಾ ನದಿಯಿಂದ ನೀರನ್ನೆತ್ತಿ 3,150 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ₹143.80 ಕೋಟಿಗಳ ಯಡ್ಡಳ್ಳಿ ಏತ ನೀರಾವರಿ ಹಾಗೂ ತೆರ್ನಳ್ಳಿ ಏತ ನೀರಾವರಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ.</p>.<p>ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಜಾರಿಗೊಳಿಸುತ್ತಿರುವ ಸುರಪುರ, ಶಹಾಪುರ ಮತ್ತು ತಾವರೆಗೇರಾ ಪಟ್ಟಣಗಳ ಕುಡಿಯುವ ನೀರು ಸರಬರಾಜು ಯೋಜನೆಗಳ ಒಟ್ಟಾರೆ ₹381.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.</p>.<p class="Subhead"><strong>ಪ್ರಮುಖ ತೀರ್ಮಾನಗಳು:</strong></p>.<p><span class="Bullet">*</span> ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹೊಸ ಕಟ್ಟಡ ನಿರ್ಮಾಣಕ್ಕೆ ₹85 ಕೋಟಿ.</p>.<p><span class="Bullet">*</span> ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಗಳ ಹಣಕಾಸಿನ ಸ್ಥಿತಿಗತಿ ಸುಧಾರಣೆಗಾಗಿ ಸಾಲದ ಪುನರ್ ರಚನೆ ಮತ್ತು ರಾಜ್ಯ ಸರ್ಕಾರದಿಂದ ಇವೆರಡೂ ಕಂಪನಿಗಳಿಗೆ ಬಡ್ಡಿ ರಹಿತ ಸಾಲಗಳನ್ನು ಷೇರು ಬಂಡವಾಳವಾಗಿ ಪರಿವರ್ತಿಸಲು ಒಪ್ಪಿಗೆ.</p>.<p><span class="Bullet">*</span> ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ ಹೆಚ್ಚುವರಿಯಾಗಿ ₹50 ಕೋಟಿ ಷೇರು ಬಂಡವಾಳ ಬಿಡುಗಡೆಗೆ ಅನುಮತಿ.</p>.<p><span class="Bullet">*</span> ಕೃತಕ ಬುದ್ಧಿಮತ್ತೆ, ಯಾಂತ್ರೀಕೃತ ಕಲಿಕೆ, ವಿದ್ಯುತ್ ಚಾಲಿತ ವಾಹನಗಳು, ವೈದ್ಯ ತಂತ್ರಜ್ಞಾನ ವಲಯಗಳ ನಾವೀನ್ಯತೆ ಮತ್ತು ತೀವ್ರ ತಾಂತ್ರಿಕ ನವೋದ್ಯಮ ಕಂಪನಿಗಳನ್ನು ಬೆಂಬಲಿಸಲು ₹100 ಕೋಟಿ ಬಂಡವಾಳ ನಿಧಿ ಸ್ಥಾಪಿಸಲು ಒಪ್ಪಿಗೆ.</p>.<p><span class="Bullet">*</span> ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ.</p>.<p><strong>ಕೆಪಿಎಸ್ಸಿ ಮಸೂದೆ ಮುಂದಕ್ಕೆ</strong><br />ಕೆಪಿಎಸ್ಸಿ 2011 ನೇ ಬ್ಯಾಚ್ನ 362 ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ರಕ್ಷಣೆಗಾಗಿ ತಿದ್ದುಪಡಿ ಮಸೂದೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದರೂ, ಯಾವುದೇ ತೀರ್ಮಾನ ತೆಗೆದುಕೊಳ್ಳಲಿಲ್ಲ. ಇದನ್ನು ಮುಂದಿನ ಸಂಪುಟ ಸಭೆಯಲ್ಲಿ ಪರಿಶೀಲಿಸಲು ತೀರ್ಮಾನಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<p>ಕಾನೂನಿನ ಕೆಲವು ಅಂಶಗಳ ಬಗ್ಗೆ ಇನ್ನಷ್ಟು ವಿಸ್ತೃತ ಚರ್ಚೆಯ ಅಗತ್ಯವಿದೆ ಎಂಬ ಸಲಹೆ ಸಭೆಯಲ್ಲಿ ಕೇಳಿ ಬಂದಿತು. ಇದರಿಂದಾಗಿ ಮಸೂದೆಯು ಮುಂದಿನ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.</p>.<p><strong>ಧಾರವಾಡ–ಬೆಳಗಾವಿ ರೈಲು ಮಾರ್ಗಕ್ಕೆ ₹927 ಕೋಟಿ</strong></p>.<p>ಧಾರವಾಡ– ಕಿತ್ತೂರು– ಬೆಳಗಾವಿ ನೂತನ ರೈಲು ಮಾರ್ಗ ನಿರ್ಮಾಣಕ್ಕಾಗಿ ₹927.40 ಕೋಟಿ ಮೊತ್ತದ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.</p>.<p>2021–22 ನೇ ಸಾಲಿನ ಐಇಬಿಆರ್ ಅಡಿ ಕರ್ನಾಟಕ ನೀರಾವರಿ ನಿಗಮಕ್ಕೆ ಅವಧಿ ಸಾಲಗಳ ಮೂಲಕ ₹650 ಕೋಟಿ, ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ₹250 ಕೋಟಿ, ಕಾವೇರಿ ನೀರಾವರಿ ನಿಗಮಕ್ಕೆ ₹250 ಕೋಟಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ₹500 ಕೋಟಿ ಹಣ ಸಂಗ್ರಹಿಸಲು ಮತ್ತು ಸರ್ಕಾರಿ ಖಾತರಿಗೂ ಒಪ್ಪಿಗೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ(ಸುವರ್ಣ ವಿಧಾನಸೌಧ):</strong> ವಿವಿಧ ಕುಡಿಯುವ ನೀರಿನ ಯೋಜನೆಗಳು ಮತ್ತು ನೀರಾವರಿ ಯೋಜನೆಗಳಿಗೆ ₹1,332.21 ಕೋಟಿ ಅನುದಾನ ಒದಗಿಸಲು ಸೋಮವಾರ ಇಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಜಲ್ ಜೀವನ್ ಮಿಷನ್ ಯೋಜನೆಯಡಿ ಹಾವೇರಿ ಜಿಲ್ಲೆಯ ಸವಣೂರು, ಶಿಗ್ಗಾವಿ, ಹಾನಗಲ್ ಮತ್ತು ಹಾವೇರಿ ತಾಲ್ಲೂಕಿನ 285 ಗ್ರಾಮಗಳ (291 ಜನವಸತಿಗಳಿಗೆ), ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ₹645 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಮೂಲಗಳು ತಿಳಿಸಿವೆ.</p>.<p>ಆಲಮಟ್ಟಿ ಎಡದಂಡೆ ಕಾಲುವೆ ಕಿ.ಮೀ 0.00 ರಿಂದ 68.24 ವರೆಗಿನ (ಬಾಕಿ ಉಳಿದ) ಕಾಲುವೆ ಜಾಲದ ಹಾಗೂ ವಿತರಣಾ ಕಾಲುವೆಗಳ ಸ್ಟ್ರಕ್ಚರ್ ಒಳಗೊಂಡಂತೆ ಆಧುನೀಕರಣ ಕಾಮಗಾರಿಗಳನ್ನು ₹75,41 ಕೋಟಿ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.</p>.<p>ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಕಾಗಿಣಾ ನದಿಯಿಂದ ನೀರನ್ನೆತ್ತಿ 3,150 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ₹143.80 ಕೋಟಿಗಳ ಯಡ್ಡಳ್ಳಿ ಏತ ನೀರಾವರಿ ಹಾಗೂ ತೆರ್ನಳ್ಳಿ ಏತ ನೀರಾವರಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ.</p>.<p>ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಜಾರಿಗೊಳಿಸುತ್ತಿರುವ ಸುರಪುರ, ಶಹಾಪುರ ಮತ್ತು ತಾವರೆಗೇರಾ ಪಟ್ಟಣಗಳ ಕುಡಿಯುವ ನೀರು ಸರಬರಾಜು ಯೋಜನೆಗಳ ಒಟ್ಟಾರೆ ₹381.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.</p>.<p class="Subhead"><strong>ಪ್ರಮುಖ ತೀರ್ಮಾನಗಳು:</strong></p>.<p><span class="Bullet">*</span> ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹೊಸ ಕಟ್ಟಡ ನಿರ್ಮಾಣಕ್ಕೆ ₹85 ಕೋಟಿ.</p>.<p><span class="Bullet">*</span> ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಗಳ ಹಣಕಾಸಿನ ಸ್ಥಿತಿಗತಿ ಸುಧಾರಣೆಗಾಗಿ ಸಾಲದ ಪುನರ್ ರಚನೆ ಮತ್ತು ರಾಜ್ಯ ಸರ್ಕಾರದಿಂದ ಇವೆರಡೂ ಕಂಪನಿಗಳಿಗೆ ಬಡ್ಡಿ ರಹಿತ ಸಾಲಗಳನ್ನು ಷೇರು ಬಂಡವಾಳವಾಗಿ ಪರಿವರ್ತಿಸಲು ಒಪ್ಪಿಗೆ.</p>.<p><span class="Bullet">*</span> ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ ಹೆಚ್ಚುವರಿಯಾಗಿ ₹50 ಕೋಟಿ ಷೇರು ಬಂಡವಾಳ ಬಿಡುಗಡೆಗೆ ಅನುಮತಿ.</p>.<p><span class="Bullet">*</span> ಕೃತಕ ಬುದ್ಧಿಮತ್ತೆ, ಯಾಂತ್ರೀಕೃತ ಕಲಿಕೆ, ವಿದ್ಯುತ್ ಚಾಲಿತ ವಾಹನಗಳು, ವೈದ್ಯ ತಂತ್ರಜ್ಞಾನ ವಲಯಗಳ ನಾವೀನ್ಯತೆ ಮತ್ತು ತೀವ್ರ ತಾಂತ್ರಿಕ ನವೋದ್ಯಮ ಕಂಪನಿಗಳನ್ನು ಬೆಂಬಲಿಸಲು ₹100 ಕೋಟಿ ಬಂಡವಾಳ ನಿಧಿ ಸ್ಥಾಪಿಸಲು ಒಪ್ಪಿಗೆ.</p>.<p><span class="Bullet">*</span> ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ.</p>.<p><strong>ಕೆಪಿಎಸ್ಸಿ ಮಸೂದೆ ಮುಂದಕ್ಕೆ</strong><br />ಕೆಪಿಎಸ್ಸಿ 2011 ನೇ ಬ್ಯಾಚ್ನ 362 ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ರಕ್ಷಣೆಗಾಗಿ ತಿದ್ದುಪಡಿ ಮಸೂದೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದರೂ, ಯಾವುದೇ ತೀರ್ಮಾನ ತೆಗೆದುಕೊಳ್ಳಲಿಲ್ಲ. ಇದನ್ನು ಮುಂದಿನ ಸಂಪುಟ ಸಭೆಯಲ್ಲಿ ಪರಿಶೀಲಿಸಲು ತೀರ್ಮಾನಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<p>ಕಾನೂನಿನ ಕೆಲವು ಅಂಶಗಳ ಬಗ್ಗೆ ಇನ್ನಷ್ಟು ವಿಸ್ತೃತ ಚರ್ಚೆಯ ಅಗತ್ಯವಿದೆ ಎಂಬ ಸಲಹೆ ಸಭೆಯಲ್ಲಿ ಕೇಳಿ ಬಂದಿತು. ಇದರಿಂದಾಗಿ ಮಸೂದೆಯು ಮುಂದಿನ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.</p>.<p><strong>ಧಾರವಾಡ–ಬೆಳಗಾವಿ ರೈಲು ಮಾರ್ಗಕ್ಕೆ ₹927 ಕೋಟಿ</strong></p>.<p>ಧಾರವಾಡ– ಕಿತ್ತೂರು– ಬೆಳಗಾವಿ ನೂತನ ರೈಲು ಮಾರ್ಗ ನಿರ್ಮಾಣಕ್ಕಾಗಿ ₹927.40 ಕೋಟಿ ಮೊತ್ತದ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.</p>.<p>2021–22 ನೇ ಸಾಲಿನ ಐಇಬಿಆರ್ ಅಡಿ ಕರ್ನಾಟಕ ನೀರಾವರಿ ನಿಗಮಕ್ಕೆ ಅವಧಿ ಸಾಲಗಳ ಮೂಲಕ ₹650 ಕೋಟಿ, ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ₹250 ಕೋಟಿ, ಕಾವೇರಿ ನೀರಾವರಿ ನಿಗಮಕ್ಕೆ ₹250 ಕೋಟಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ₹500 ಕೋಟಿ ಹಣ ಸಂಗ್ರಹಿಸಲು ಮತ್ತು ಸರ್ಕಾರಿ ಖಾತರಿಗೂ ಒಪ್ಪಿಗೆ ನೀಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>