ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್ಸಿನ ಪಿ.ಆರ್. ರಮೇಶ್ ಅವರು ನಿಯಮ 330ರ ಅಡಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ‘ಈ ಸಾಲಿನಲ್ಲಿ ಆಯ್ಕೆಯಾಗಿ ಹುದ್ದೆ ವಂಚಿತರಾದ ಅಭ್ಯರ್ಥಿಗಳ ಬಗ್ಗೆ ಸರ್ಕಾರಕ್ಕೆ ಕಾಳಜಿ ಇದೆ. ಈಗಾಗಲೇ ಈ ಬಗ್ಗೆ ಚರ್ಚೆ ನಡೆಸಿದ್ದೇವೆ. ಆದರೆ, ಕಾನೂನಾತ್ಮಕವಾಗಿ ಸಂಕೀರ್ಣವಾದ ವಿಷಯ. ಹೀಗಾಗಿ, ಅಂತಿಮ ತೀರ್ಮಾನಕ್ಕೆ ಬರಲು ಕಾಲಾವಕಾಶ ಅಗತ್ಯವಿದೆ’ ಎಂದರು.