ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ನ ಈ. ತುಕಾರಾಂ ಪ್ರಶ್ನೆಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಉತ್ತರಿಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಕಾಗೇರಿ, ’ಹಣಕಾಸು ಇಲಾಖೆಯ ಅಧಿಕಾರಿಗಳ ಧೋರಣೆಯಿಂದ ಗ್ರಾಮೀಣ ಜನರ ಜೀವ ಹಾಳಾಗುತ್ತಿದೆ. ಹಣಕಾಸು ಇಲಾಖೆಯ ಅಧಿಕಾರಿಗಳು ಕನಿಷ್ಠ 4 ದಿನ ಹಳ್ಳಿಗಳಲ್ಲಿ ವಾಸ್ತವ್ಯ ಮಾಡಬೇಕು. ಆಗ ನೈಜ ಸಮಸ್ಯೆ ಅರಿವಾಗುತ್ತದೆ. ಆಗ ಅಬಕಾರಿ ಆದಾಯ ಹೆಚ್ಚಿಸಲು ಒತ್ತಡ ಹೇರುವುದು ನಿಲ್ಲಲಿದೆ‘ ಎಂದರು.