ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಬಕಾರಿ ಆದಾಯ ಹೆಚ್ಚಳಕ್ಕೆ ಒತ್ತಡ ಬೇಡ: ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ

Last Updated 21 ಡಿಸೆಂಬರ್ 2021, 19:58 IST
ಅಕ್ಷರ ಗಾತ್ರ

ಬೆಳಗಾವಿ: ಅಬಕಾರಿ ಆದಾಯವನ್ನು ಹೆಚ್ಚಿಸಲು ಹಣಕಾಸು ಇಲಾಖೆಯವರು ಒತ್ತಡ ಹೇರಬಾರದು. ಒತ್ತಡ ಹೇರಿದರೆ ಹಳ್ಳಿಗಳಲ್ಲಿ ಮದ್ಯದಂಗಡಿ ತಲೆ ಎತ್ತಿ ಸಮಸ್ಯೆ ಸೃಷ್ಟಿಯಾಗಲಿದೆ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ಮಂಗಳವಾರ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ನ ಈ. ತುಕಾರಾಂ ಪ್ರಶ್ನೆಗೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಉತ್ತರಿಸುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಕಾಗೇರಿ, ’ಹಣಕಾಸು ಇಲಾಖೆಯ ಅಧಿಕಾರಿಗಳ ಧೋರಣೆಯಿಂದ ಗ್ರಾಮೀಣ ಜನರ ಜೀವ ಹಾಳಾಗುತ್ತಿದೆ. ಹಣಕಾಸು ಇಲಾಖೆಯ ಅಧಿಕಾರಿಗಳು ಕನಿಷ್ಠ 4 ದಿನ ಹಳ್ಳಿಗಳಲ್ಲಿ ವಾಸ್ತವ್ಯ ಮಾಡಬೇಕು. ಆಗ ನೈಜ ಸಮಸ್ಯೆ ಅರಿವಾಗುತ್ತದೆ. ಆಗ ಅಬಕಾರಿ ಆದಾಯ ಹೆಚ್ಚಿಸಲು ಒತ್ತಡ ಹೇರುವುದು ನಿಲ್ಲಲಿದೆ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT