ವಿಧಾನ ಪರಿಷತ್ನಲ್ಲಿ ಸೋಮವಾರ ಕಾಂಗ್ರೆಸ್ನ ಎಸ್. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ರಾಜ್ಯದಲ್ಲಿ ಶ್ರೀಗಂಧ ಬೆಳೆಯಲು ಅರಣ್ಯ ಇಲಾಖೆಯ ಅನುಮತಿ ಅಗತ್ಯ ಇಲ್ಲ. ಶ್ರೀಗಂಧದ ಮರಗಳನ್ನು ಮೈಸೂರು, ಶಿವಮೊಗ್ಗ ಮತ್ತು ಧಾರವಾಡ ಸರ್ಕಾರಿ ಶ್ರೀಗಂಧದ ಕೋಠಿಗಳಿಗೆ ಹಾಗೂ ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಗಳಿಗೆ ಮಾರಬಹುದು. ಮುಂದಿನ ದಿನಗಳಲ್ಲಿ ರೈತರು ಎಲ್ಲಿ ಬೇಕಾದರೂ ಶ್ರೀಗಂಧ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗುವುದು’ ಎಂದು ವಿವರಿಸಿದರು.