ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ‘362 ಅಭ್ಯರ್ಥಿಗಳ ನೇಮಕವನ್ನು ನ್ಯಾಯಾಲಯ ರದ್ದುಪಡಿಸಿತ್ತು. ನೇಮಕ ಸಂಬಂಧ ಕೆಪಿಎಸ್ಸಿ ಸದಸ್ಯರು ಲಂಚ ಕೇಳಿದ್ದಾರೆ ಎಂದು ಸಿಐಡಿ ವರದಿಯಲ್ಲಿತ್ತು. ಆದರೆ, ಸದಸ್ಯರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಅಭ್ಯರ್ಥಿಗಳು ಅಕ್ರಮ ಎಸಗಿಲ್ಲ ಎಂದೂ ಸಿಐಡಿ ವರದಿಯಲ್ಲಿದೆ. ಹೀಗಾಗಿ, ಅವರನ್ನು ದಂಡಿಸುವುದು ಸರಿಯಲ್ಲ. ಅವರಿಗೆ ಉದ್ಯೋಗ ಸಿಗದ ಸ್ಥಿತಿ ನಿರ್ಮಾಣವಾಗಬಾರದು. ಈ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಉದ್ದೇಶವನ್ನು ಈ ಮಸೂದೆ ಹೊಂದಿದೆ’ ಎಂದು ಹೇಳಿದರು.