ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ‘ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ದಾರಿ ತಪ್ಪಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಒಂದು ಜಾತಿ ಹಾಗೂ ಧರ್ಮವನ್ನು ಗುರಿಯಾಗಿಟ್ಟುಕೊಂಡು, ರಾಜಕೀಯ ಕಾರಣಕ್ಕಾಗಿ ಕಾಯ್ದೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದು ಕೂಡಾ ಆ ಪಕ್ಷದ ರಹಸ್ಯ ಕಾರ್ಯಸೂಚಿಯಾಗಿದೆ. ಇದನ್ನು ವಿರೋಧಿಸಬೇಕಾಗಿದೆ’ ಎಂದರು. ಅದಕ್ಕೆ ಸಭೆ ಸರ್ವಾನುಮತ ದಿಂದ ಒಪ್ಪಿಗೆ ಸೂಚಿಸಿತು.