ವಿಧಾನ ಪರಿಷತ್ನಲ್ಲಿ ಸೋಮವಾರ ಗಮನ ಸೆಳೆಯುವ ಸೂಚನೆ ಮಂಡಿಸಿದ ಜೆಡಿಎಸ್ನ ಕೆ.ಟಿ. ಶ್ರೀಕಂಠೇಗೌಡ, ‘ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮೂರು ಗುಂಟೆ ಹಾಗೂ ಉಳಿದ ಎಲ್ಲ ಜಿಲ್ಲೆಗಳಲ್ಲಿ ಐದು ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಜಮೀನುಗಳನ್ನು ಪರಭಾರೆ ಮಾಡಿರುವುದನ್ನು ನಿಷೇಧಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಇದರಿಂದ ಹಳ್ಳಿಯ ಜನರಿಗೆ ತೊಂದರೆ ಆಗುತ್ತಿದೆ. ತಕ್ಷಣವೇ ಈ ಮಿತಿಯನ್ನು ಸಡಿಲಿಸಬೇಕು’ ಎಂದು ಆಗ್ರಹಿಸಿದರು.