ಕರ್ನಾಟಕ ಬಂದ್ಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಸೋಮವಾರ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ಬಿಜೆಪಿಯೇತರ ರಾಜಕೀಯ ಪಕ್ಷಗಳು ಸೇರಿದಂತೆ, ಹಲವು ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿದ್ದ ಬಂದ್, ಮಧ್ಯಾಹ್ನದವರೆಗೆ ಮಾತ್ರ ಸೀಮಿತವಾಗಿತ್ತು. ನಂತರ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.
ಕೃಷಿ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರಗಳ ತಿದ್ದುಪಡಿ ಮಸೂದೆಯನ್ನು ವಿರೋಧಿ ಸೋಮವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ನಗರದಲ್ಲಿ ಸಿ.ಐ.ಟಿ.ಯು, ಕರ್ನಾಟಕ ಪ್ರದೇಶ ರೈತ ಸಂಘ, ಎಸ್.ಎಫ್.ಐ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ, ಆಟೊ ರಿಕ್ಷಾ ಸಂಘಟನೆಗಳು ಹಾಗೂ ಮಹಿಳಾ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಯಿತು. ಜಿಲ್ಲಾ ರಂಗಮಂದಿರದಿಂದ ಹೊರಟು, ಲಂಡನ್ ಬ್ರಿಜ್ ಬಳಿಗೆ ಬಂದು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರವನ್ನು ತಡೆದು ಪ್ರತಿಭಟನೆ ನಡೆಸಲಾಯಿತು.
ವಿವಿಧ ಕಾಯ್ದೆಗಳ ತಿದ್ದುಪಡಿ ಸುಗ್ರಿವಾಜ್ಞೆಗಳ ವಿರೋಧಿಸಿ ವಿವಿಧ ಸಂಘಟನೆಗಳು ಮತ್ತು ಕೆಲ ಪಕ್ಷಗಳು ಸೇರಿ ಸೋಮವಾರ ನಡೆಸಿದ ಕರ್ನಾಟಕ ಬಂದ್ಗೆ ಚಿಕ್ಕಬಳ್ಳಾಪುರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು. ಬಹುಪಾಲು ವರ್ತಕರು ತಮ್ಮ ಅಂಗಡಿಗಳನ್ನು ಮುಚ್ಚುವ ಮೂಲಕ ಬಂದ್ಗೆ ಸ್ವಯಂ ಪ್ರೇರಿತರಾಗಿ ಬೆಂಬಲ ನೀಡಿದರು. ಕೆಎಸ್ಆರ್ಟಿಸಿ ಬಸ್ಗಳು, ಆಟೊಗಳು ಮತ್ತು ಜನ ಸಂಚಾರ ವಿರಳವಾಗಿತ್ತು. ಖಾಸಗಿ ಬಸ್ಗಳು, ಸಾರಿಗೆ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು.
ಭೂಸುಧಾರಣಾ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಸೋಮವಾರ ಕರೆ ನೀಡಲಾಗಿದ್ದ ರಾಜ್ಯ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಸಾರ್ವಜನಿಕ ಸಾರಿಗೆ, ವ್ಯಾಪಾರ ವಹಿವಾಟು ಎಂದಿನಂತಿತ್ತು. ಜನಜೀವನಕ್ಕೆ ಹೆಚ್ಚು ತೊಂದರೆಯಾಗಲಿಲ್ಲ.
ಕೃಷಿ ಹಾಗೂ ಎಪಿಎಂಸಿ ತಿದ್ದುಪಡಿ ಮಸೂದೆ ಖಂಡಿಸಿ ರೈತ, ದಲಿತ, ಕಾರ್ಮಿಕರ ಐಕ್ಯ ಹೋರಾಟ ಸಮಿತಿಯು ‘ಕರ್ನಾಟಕ ಬಂದ್’ಗೆ ಕರೆ ಕೊಟ್ಟಿದ್ದರಿಂದ ಕೋಲಾರದಲ್ಲಿ ಸೋಮವಾರ ವಾಣಿಜ್ಯ ವಹಿವಾಟು ಹಾಗೂ ಬಸ್ ಸೇವೆ ಸ್ಥಗಿತಗೊಂಡು ಜನಜೀವನ ಅಸ್ತವ್ಯಸ್ತವಾಯಿತು.
ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರ ರೂಪಿಸಿದ ಮಸೂದೆಗಳನ್ನು ವಿರೋಧಿಸಿ ರೈತರು ಮತ್ತು ಕಾರ್ಮಿಕರು ಸೋಮವಾರ ಕರೆ ನೀಡಿದ್ದ ಬಂದ್ ಕೋಟೆನಾಡು ಚಿತ್ರದುರ್ಗದಲ್ಲಿ ಭಾಗಶಃ ಯಶಸ್ವಿಯಾಯಿತು. ತಾಲ್ಲೂಕು ಕೇಂದ್ರಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.
ರೈತ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ‘ಹಾವೇರಿ ಬಂದ್’ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ರೈತ ಸಂಘದ ಕಾರ್ಯಕರ್ತರು ರಣಕಹಳೆ ಮೊಳಗಿಸಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ತರಲು ಹೊರಟಿರುವ ವಿವಿಧ ಕಾಯ್ದೆ ಹಾಗೂ ಮಸೂದೆಗಳ ವಾಪಸ್ಗೆ ಆಗ್ರಹಿಸಿ ಸೋಮವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಅಂಗವಾಗಿ ರಾಮನಗರದಲ್ಲಿ ಹಲವು ಸಂಘಟನೆಗಳಿಂದ ಒಗ್ಗಟ್ಟಿನ ಪ್ರತಿಭಟನೆಗಳು ನಡೆದವು. ಆದರೆ ಜನಜೀವನಕ್ಕೆ ಹೆಚ್ಚಿನ ತೊಂದರೆ ಆಗಲಿಲ್ಲ.