ರಾಜಭವನದ ಪ್ರವೇಶದ್ವಾರದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಪಾಸ್ ಇದ್ದವರನ್ನು ಮಾತ್ರ ಒಳಗೆ ಬಿಡಲಾಗುತ್ತಿದೆ. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಕೆಲವು ಶಾಸಕರು, ಅವರ ಕುಟುಂಬ ಸದಸ್ಯರು ರಾಜಭವನಕ್ಕೆ ಬರುತ್ತಿದ್ದಾರೆ. ಕಾರ್ಕಳ ಶಾಸಕ ಸುನೀಲ್ ಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು ಈಗಾಗಲೇ ರಾಜಭವನ ತಲುಪಿದ್ದಾರೆ. ಸಚಿವರಾಗಿ ಪ್ರಮಾಣ ಸ್ವೀಕರಿಸಲಿರುವ ಕೆ.ಎಸ್. ಈಶ್ವರಪ್ಪ., ಎಸ್. ಅಂಗಾರ ಕೂಡಾ ರಾಜಭವನಕ್ಕೆ ಬಂದಿದ್ದಾರೆ.