ಮಂಡಳಿಯ ಅಧ್ಯಕ್ಷ ಅನಂತ ಹೆಗಡೆ ಅಶೀಸರ, ‘ಈ ಅಭಿಯಾನವು ಆ.15ರ ವರೆಗೆ ರಾಜ್ಯದೆಲ್ಲೆಡೆ ನಡೆಯಲಿದೆ. ರಾಜ್ಯದಲ್ಲಿನ ಪಂಚಾಯತಿ, ನಗರ ಸಂಸ್ಥೆಗಳಲ್ಲಿ ರಚಿತಗೊಂಡಿರುವ ಜೀವವೈವಿಧ್ಯ ಸಮಿತಿಗಳು ಸಕ್ರಿಯವಾಗಬೇಕು. ಸ್ಥಾನಿಕವಾಗಿ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿನ ನಿಸರ್ಗ ಸಂಪತ್ತಿನ ಪರಿಸ್ಥಿತಿಯ ಅವಲೋಕನವಾಗಬೇಕು. ಕೆರೆಗಳು ಹಾಗೂ ವನಗಳ ಪುನಶ್ಚೇತನ ಕಾರ್ಯಗಳಲ್ಲಿ ಜನತೆ ಪಾಲ್ಗೊಳ್ಳಬೇಕೆಂಬ ಉದ್ದೇಶದಿಂದ ಈ ಅಭಿಯಾನ ರೂಪಿಸಲಾಗಿದೆ’ ಎಂದು ಹೇಳಿದರು.