ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಧ್ವನಿ ಎತ್ತಿರುವುದು ಸಂತ್ರಸ್ತೆಗಾಗಿಯಲ್ಲ, ಸಿದ್ದರಾಮಯ್ಯಗಾಗಿ: ಬಿಜೆಪಿ

Last Updated 5 ಏಪ್ರಿಲ್ 2021, 8:40 IST
ಅಕ್ಷರ ಗಾತ್ರ

ಬೆಂಗಳೂರು: ಸಿ.ಡಿ.ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆಗಾಗಿ ಅಲ್ಲ, ಬದಲಿಗೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಾಗಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಕಾಂಗ್ರೆಸ್ ನಡೆಯನ್ನು ಟೀಕಿಸಿ ಬಿಜೆಪಿಯ ರಾಜ್ಯ ಘಟಕದ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ಮಾಜಿ ಅಬಕಾರಿ ಸಚಿವ ಎಚ್‌.ವೈ.ಮೇಟಿ ಪ್ರಕರಣವನ್ನು (2016 ರಲ್ಲಿ ಎಚ್‌.ವೈ.ಮೇಟಿ ವಿರುದ್ಧ ಅತ್ಯಾಚಾರ ಆರೋಪ ಬಂದಿತ್ತು) ಉಲ್ಲೇಖಿಸಲಾಗಿದೆ.

‘ಮೇಟಿ ಪ್ರಕರಣದಲ್ಲಿ ಸಂತ್ರಸ್ತೆ ಪ್ರಕರಣ ದಾಖಲಿಸಿದ್ದರೂ ಎಫ್‌ಐಆರ್ ಕೂಡಾ ದಾಖಲಿಸಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ. ಈಗ ಕರ್ನಾಟಕ ಕಾಂಗ್ರೆಸ್ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆಗಾಗಿ ಅಲ್ಲ, ಸಿದ್ದರಾಮಯ್ಯ ಅವರಿಗಾಗಿ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಿಕ್ಕಿಸಿಹಾಕಲು ಸಿದ್ದರಾಮಯ್ಯ ಅವರು ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯನ್ನು ಬಳಸಿಕೊಳ್ಳುತ್ತಿದ್ದಾರೆ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT