ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಸಿದ್ದರಾಮಯ್ಯ ವಿರುದ್ಧ ‘ಪಿಎಫ್‌ಐ ಭಾಗ್ಯ’ ಪೋಸ್ಟರ್ ಅಭಿಯಾನ

ಪೇಸಿಎಂ ಅಭಿಯಾನಕ್ಕೆ ಬಿಜೆಪಿ ತಿರುಗೇಟು?
Last Updated 11 ಅಕ್ಟೋಬರ್ 2022, 3:21 IST
ಅಕ್ಷರ ಗಾತ್ರ

ಚಿತ್ರದುರ್ಗ: ‘ಸಿದ್ರಾಮುಲ್ಲಾನ ಉಗ್ರಭಾಗ್ಯ ಹಾಗೂ ಲೀಲೆಗಳನ್ನು ತಿಳಿಯಲು ಸ್ಕ್ಯಾನ್ ಮಾಡಿ ಎಂಬ ಕ್ಯೂ ಆರ್ ಕೋಡ್ ಹೊಂದಿದ ಪೋಸ್ಟರ್ ಅನ್ನು ಚಳ್ಳಕೆರೆ ನಗರದ ವಿವಿಧೆಡೆ ಅಂಟಿಸಲಾಗಿದೆ. ಸಿದ್ದರಾಮಯ್ಯ ಅವರ ಭಾವಚಿತ್ರದೊಂದಿಗೆ ‘ಪಿಎಫ್‌ಐ ಭಾಗ್ಯ’ಎಂದು ಉಲ್ಲೇಖ ಮಾಡಲಾಗಿದೆ.

ಭಾರತ್ ಜೋಡೊ ಯಾತ್ರೆ ಸಾಗುವ ಮಾರ್ಗದಲ್ಲಿ ಉದ್ದಕ್ಕೂ ಈ ಪೋಸ್ಟರ್ ಗಳು ರಾರಾಜಿಸುತ್ತಿವೆ. ಸಿದ್ದರಾಮಯ್ಯ ಅವರು ಟಿಪ್ಪು ಸುಲ್ತಾನ್ ಪೇಟ ಧರಿಸಿ ಕೈಯಲ್ಲಿ ಖಡ್ಗ ಹಿಡಿದ ಚಿತ್ರ ಪೋಸ್ಟರ್ ಗಳಲ್ಲಿದೆ.

ರಾಹುಲ್‌ ಗಾಂಧಿ ನಡೆಸುತ್ತಿರುವ ಭಾರತ್ ಜೋಡೊ ಯಾತ್ರೆಯ ಪ್ರಚಾರಕ್ಕೆ ಅಳವಡಿಸಿದ ಫ್ಲೆಕ್ಸ್, ಬ್ಯಾನರ್ ಅಡಿಯಲ್ಲಿ ಈ ಪೋಸ್ಟರ್‌ಗಳು ಕಾಣಿಸಿಕೊಂಡಿವೆ. ಸೋಮವಾರ ರಾತ್ರಿ ಇವುಗಳನ್ನು ಅಂಟಿಸಿರುವ ಸಾಧ್ಯತೆ ಇದೆ. ಪೇಸಿಎಂ ಪೋಸ್ಟರ್‌ಗೆ ಪ್ರತಿಯಾಗಿ ಬಿಜೆಪಿ ಈ ಪೋಸ್ಟರ್ ಅಭಿಯಾನ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT