ನೂತನವಾಗಿ ಸ್ಥಾಪಿಸಲಿರುವ ಪ್ರಶಸ್ತಿಗಳನ್ನು ಗಡಿ ಭಾಗದಲ್ಲಿ ಕನ್ನಡ ಪರ ಕೆಲಸ ಮಾಡಿದ ಸಾಧಕರಿಗೆ ನೀಡಲು ನಿರ್ಧರಿಸಲಾಯಿತು. ರಾಜ್ಯದ ಗಡಿ ಭಾಗದಲ್ಲಿ ಬರುವ 63 ಗಡಿ ತಾಲ್ಲೂಕುಗಳಲ್ಲಿ ಹಾಗೂ ಕರ್ನಾಟಕ ಗಡಿ ಭಾಗಕ್ಕೆ ಹೊಂದಿಕೊಂಡಿರುವ ಗೋವಾ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ಕನ್ನಡ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಉತ್ಸವಗಳು, ಚಿಂತನಾ ಶಿಬಿರಗಳನ್ನು ವರ್ಷಪೂರ್ತಿ ಆಯೋಜಿಸಲು ತೀರ್ಮಾನಿಸಲಾಯಿತು.