ಕರ್ನಾಟಕ ಬಜೆಟ್–2022 | ನೀರಾವರಿಗೆ ಆದ್ಯತೆ; ಎತ್ತಿನಹೊಳೆ ಯೋಜನೆಗೆ 3 ಸಾವಿರ ಕೋಟಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಾರಿಯ ಬಜೆಟ್ನಲ್ಲಿ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದಾರೆ. ಮೇಕೆದಾಟು ಯೋಜನೆಗಾಗಿ ಒಂದು ಸಾವಿರ ಕೋಟಿ ಅನುದಾನ ನೀಡಿದ್ದಾರೆ.
ಪ್ರಮುಖ ನೀರಾವರಿ ಯೋಜನೆಗಳಿಗೆ ದೊರೆತ ಅನುದಾನ
* 3ನೇ ಹಂತದ ಕೃಷ್ಣಾ ಮೇಲ್ದಂಡೆ ಯೋಜನೆಗೆ ₹ 5 ಸಾವಿರ ಕೋಟಿ
* ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ ₹ 1 ಸಾವಿರ ಕೋಟಿ
* ಭದ್ರಾ ಮೇಲ್ದಂಡೆ ಯೋಜನೆಗೆ ₹ 3 ಸಾವಿರ ಕೋಟಿ
* ಎತ್ತಿನಹೊಳೆ ಯೋಜನೆಗೆ ₹ 3 ಸಾವಿರ ಕೋಟಿ
* ಮೇಕೆದಾಟು ಯೋಜನೆಗೆ ₹ 1 ಸಾವಿರ ಕೋಟಿ
* ತುಂಗಭದ್ರಾ ಜಲಾಶಯದ ನೀರು ಸಂಗ್ರಹ ಕೊರತೆ ಸರಿದೂಗಿಸಲು ನವಲೆ ಬಳಿ ಸಮತೋಲನಾ ಜಲಾಶಯ ನಿರ್ಮಾಣಕ್ಕೆ ₹ 1 ಸಾವಿರ ಕೋಟಿ
* ₹ 8,774 ಕೋಟಿ ಮೊತ್ತದ ಹೊಸ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಕ್ರಮ
* ರಾಜ್ಯಗಳ ಕೆರೆ ಅಭಿವೃದ್ಧಿಗೆ ₹ 500 ಕೋಟಿ ಮೊತ್ತದ ಕ್ರಿಯಾ ಯೋಜನೆ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.