ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ 'ಯಶಸ್ವಿನಿ' ಆರೋಗ್ಯ ಸೇವೆ ಮರು ಜಾರಿ: ಬೊಮ್ಮಾಯಿ

Last Updated 4 ಮಾರ್ಚ್ 2022, 10:54 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸ್ಥಗಿತಗೊಳಿಸಲಾಗಿದ್ದ 'ಯಶಸ್ವಿನಿ' ಆರೋಗ್ಯ ಸೇವೆಯನ್ನು ಮರು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬಜೆಟ್‌ ಭಾಷಣದಲ್ಲಿ ಘೋಷಿಸಿದರು.

ಯಶಸ್ವಿನಿ ಯೋಜನೆ ಮರು ಜಾರಿಗೆ ರೈತರು ಹಲವು ದಿನಗಳಿಂದ ಬೇಡಿಕೆ ಇಟ್ಟಿದ್ದು, ಆ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಲು ಸರ್ಕಾರವು ನಿರ್ಧರಿಸಿದೆ.

ಈ ಯೋಜನೆಯಿಂದಾಗಿ ಗ್ರಾಮೀಣ ಭಾಗದ ರೈತ ಕುಟುಂಬಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳು ಸಿಗಲು ಸಹಕಾರಿಯಾಗಲಿದೆ. ಈ ಯೋಜನೆಗಾಗಿ ಸರ್ಕಾರವು ₹300 ಕೋಟಿ ಒದಗಿಸಲಿದೆ.

ಇದರೊಂದಿಗೆ ರಾಜ್ಯದಲ್ಲಿ ನಡೆಯುತ್ತಿರುವ ಸಹಕಾರಿ ವಲಯದ ಆಸ್ಪತ್ರೆಗಳನ್ನು ಬಲಪಡಿಸಲು ವಿಶೇಷ ನೆರವು ನೀಡುವುದಾಗಿ ಘೋಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT