ಬೆಂಗಳೂರು: ರಾಜ್ಯದಲ್ಲಿ ಸ್ಥಗಿತಗೊಳಿಸಲಾಗಿದ್ದ 'ಯಶಸ್ವಿನಿ' ಆರೋಗ್ಯ ಸೇವೆಯನ್ನು ಮರು ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ಬಜೆಟ್ ಭಾಷಣದಲ್ಲಿ ಘೋಷಿಸಿದರು.
ಯಶಸ್ವಿನಿ ಯೋಜನೆ ಮರು ಜಾರಿಗೆ ರೈತರು ಹಲವು ದಿನಗಳಿಂದ ಬೇಡಿಕೆ ಇಟ್ಟಿದ್ದು, ಆ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಲು ಸರ್ಕಾರವು ನಿರ್ಧರಿಸಿದೆ.
ಈ ಯೋಜನೆಯಿಂದಾಗಿ ಗ್ರಾಮೀಣ ಭಾಗದ ರೈತ ಕುಟುಂಬಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳು ಸಿಗಲು ಸಹಕಾರಿಯಾಗಲಿದೆ. ಈ ಯೋಜನೆಗಾಗಿ ಸರ್ಕಾರವು ₹300 ಕೋಟಿ ಒದಗಿಸಲಿದೆ.