ಸುಮಾರು ₹24,000 ಕೋಟಿಯನ್ನು ಅಭಿವೃದ್ಧಿಗಾಗಿ ಬಳಕೆ ಮಾಡಬೇಕಾಗಿದೆ. ಕುಡಿಯುವ ನೀರು, ಶಾಲೆ, ಪರಿಸರ ಸಂರಕ್ಷಣೆ, ಕೃಷಿ ಮತ್ತು ಸಂಬಂಧಿಸಿದ ಚಟುವಟಿಕೆ, ನೈರ್ಮಲ್ಯ, ಗ್ರಾಮೀಣ ರಸ್ತೆಗಳು, ಆರೋಗ್ಯ, ದುರ್ಬಲ ವರ್ಗದವರ ಅಭಿವೃದ್ಧಿ, ವಸತಿ, ಕೌಶಲ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹಣ ಖರ್ಚು ಮಾಡಬೇಕಾಗಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಸುಪ್ರೀಂಕೋರ್ಟ್ನ ಮಾರ್ಗಸೂಚಿ ಇದ್ದು, ಆ ಪ್ರಕಾರವೇ ಕಾಮಗಾರಿಗಳು ನಡೆಯಲಿವೆ. ಈಗಾಗಲೇ ಇದಕ್ಕೆ ಸಂಬಂಧಿಸಿದ ಚಟುವಟಿಕೆ ಆರಂಭವಾಗಿದೆ ಎಂದು ಮಾಧುಸ್ವಾಮಿ ಹೇಳಿದರು.