<p><strong>ಬೆಂಗಳೂರು: </strong>ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದಕರಿಗೆ ವಿವಿಧ ರೀತಿಯ ಆರ್ಥಿಕ ಪ್ರೋತ್ಸಾಹ ನೀಡುವ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜಬೊಮ್ಮಾಯಿ ಈ ವಿಷಯ ತಿಳಿಸಿದರು.</p>.<p>ಕೋವಿಡ್ ಸಂದರ್ಭದಲ್ಲಿ ಅಮ್ಲಜನಕದ ಕೊರತೆ ಎದುರಿಸಿದ್ದೆವು. ರಾಜ್ಟಯದಲ್ಲಿ 9 ಉತ್ಪಾದನಾ ಘಟಕಗಳಿವೆ. 815 ಮೆ.ಟನ್ ಉತ್ಪಾದನಾ ಸಾಮರ್ಥ್ಯವಿದ್ದು, 5,700 ಮೆ.ಟನ್ ದಾಸ್ತಾನು ಸಾಮರ್ಥ್ಯವಿದೆ. ಇವೆರಡನ್ನೂ ಹೆಚ್ಚಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಹೂಡಿಕೆ ಮಾಡಲು ಬರುವ ಉದ್ಯಮಿಗಳಿಗೆ ಹಲವು ರಿಯಾಯ್ತಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.</p>.<p>ಇದರಲ್ಲಿ ಹೂಡಿಕೆ ಮಾಡುವ ಉದ್ಯಮಿಗೆ ಘಟಕ ಸ್ಥಾಪನೆಗೆ ಬಂಡವಾಳ ಹೂಡುವ ವೆಚ್ಚದ ಮೇಲೆ ಶೇ 25 ರಷ್ಟು ಸಹಾಯಧನ ನೀಡಲಾಗುವುದು. ಹೂಡಿಕೆದಾರರು ಕನಿಷ್ಠ ₹10 ಕೋಟಿ ಬಂಡವಾಳ ಹೂಡಬೇಕು. ಘಟಕ ಸ್ಥಾಪಿಸಿ ಮೂರು ವರ್ಷಗಳವರೆಗೆ ವಿದ್ಯುತ್ ಮೇಲಿನ ಸುಂಕ ಶೇ100 ರಷ್ಟು ವಿನಾಯ್ತಿ ನೀಡಲಾಗುತ್ತದೆ. ವಿದ್ಯುತ್ ದರ ಪಾವತಿಯ ಮೇಲೆ ಪ್ರತಿ ಟನ್ ಆಮ್ಲಜನಕ ಉತ್ಪಾದನೆ ಮೇಲೆ ₹1000 ಸಬ್ಸಿಡಿ ನೀಡಲಾಗುವುದು. ನೋಂದಣಿ ಮತ್ತು ಮುದ್ರಾಂಕದ ಸ್ಟಾಂಪ್ ಡ್ಯೂಟಿಯಲ್ಲಿ ಶೇ 100 ರಷ್ಟು ವಿನಾಯ್ತಿ, ಭೂಪರಿವರ್ತನೆಗಾಗಿ ಪಾವತಿಸುವ ಶುಲ್ಕವನ್ನು ಶೇ 100 ರಷ್ಟು ಮರುಪಾವತಿ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.</p>.<p><strong>ಬಡ್ತಿಗಾಗಿ ಸಾಮಾನ್ಯ ಹಿರಿತನ ಪಟ್ಟಿ: </strong>ಕಂದಾಯ ಇಲಾಖೆಯಲ್ಲಿ ಬಡ್ತಿಗಾಗಿ ಸಾಮಾನ್ಯ ಹಿರಿತನ ಪಟ್ಟಿ ಸಿದ್ಧಪಡಿಸಲು ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು.</p>.<p>ಈ ಮೊದಲು ನೇರವಾಗಿ ಶೇ 30, ಎಸ್ಡಿಎಯಿಂದ ಶೇ 30 ಮತ್ತು ಗ್ರಾಮಲೆಕ್ಕಿಗರಿಂದ ಶೇ 40 ಬಡ್ತಿ ನೀಡಲಾಗುತ್ತಿತ್ತು. ಸಾಮಾನ್ಯ ಹಿರಿತನ ಪಟ್ಟಿ ಮಾಡಬೇಕು ಎಂದು ಕಂದಾಯ ಇಲಾಖೆಯ ಸಿಬ್ಬಂದಿಯ ವಿವಿಧ ಸಂಘಟನೆಗಳು ಬೇಡಿಕೆ ಮಂಡಿಸಿದ್ದವು. ಅದಕ್ಕೆ ಒಪ್ಪಿಗೆ ನೀಡಿದೇವೆ ಎಂದರು.</p>.<p>ಇದರ ಪರಿಣಾಮ 3059 ಎಸ್ಡಿಎ, 3847 ಗ್ರಾಮ ಲೆಕ್ಕಿಗ ಮತ್ತು 2400 ಎಫ್ಡಿಎ ಹುದ್ದೆಗಳ ಸಾಮಾನ್ಯ ಹಿರಿತನ ಪಟ್ಟಿ ತಯಾರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.</p>.<p><strong>ಇತರ ತೀರ್ಮಾನಗಳು: </strong>* ಕರ್ನಾಟಕ ರಾಜ್ಯ ಉದ್ಯೋಗ ಆಧಾರಿತ ಕೋರ್ಸ್ಗಳನ್ನು(ಜೆಒಸಿ), ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲು ತೀರ್ಮಾನ</p>.<p>* 139 ಕೈದಿಗಳಿಗೆ ಸನ್ನಡತೆ ಬಿಡುಗಡೆಗೆ ಶಿಫಾರಸು</p>.<p>*ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಿಸಲು ₹58 ಕೋಟಿ ಆಡಳಿತಾತ್ಮಕ ಅನುಮೋದನೆ</p>.<p>*ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಗಾಗಿ ₹31.66 ಕೋಟಿ ವೆಚ್ಚದಲ್ಲಿ ಬೆಳಗಾವಿ ಮತ್ತು ಮಂಗಳೂರಿನಲ್ಲಿ ಕಟ್ಟಡವನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ</p>.<p>*ಮೈಸೂರಿನ ಲಲಿತ ಮಹಲ್ ಪ್ಯಾಲೆಸ್ ಹೊಟೇಲ್ ನಿರ್ವಹಣೆ ಮತ್ತು ಮೇಲ್ವಿಚಾರಣೆಯನ್ನು ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ಲಿಮಿಟೆಡ್ಗೆ ನೀಡಲು ಒಪ್ಪಿಗೆ</p>.<p>* ಸಿರಗುಪ್ಪಾ ಪಟ್ಟಣಕ್ಕೆ 2500 ಎಂಎಲ್ ಸಾಮರ್ಥ್ಯದ ಜಲಾಶಯ ನಿರ್ಮಿಸಲು ಯೋಜನಾ ಪರಿಷ್ಕೃತ ವೆಚ್ಚ ₹45.46 ಕೋಟಿಗೆ ಒಪ್ಪಿಗೆ</p>.<p>* ದಾಸನಪುರ ಎಪಿಎಂಸಿ, 93 ಶಾಪ್, 54 ತಿಂಗಳ ಬಾಡಿಗೆ, ಲೀಸ್ ಕಂ ಸೇಲ್ನಲ್ಲಿ 24 ಲಕ್ಷ ಇತ್ತು, 20 ಲಕ್ಷ ಕ್ಕೆ ಇಳಿಸಬೇಕು. ತಿಂಗಳ ಬಾಡಿಗೆ 20 ಸಾವಿರ ಇದ್ದದ್ದು 15 ಸಾವಿರಕ್ಕೆ ಇಳಿಸಲಾಗಿದೆ.</p>.<p>*2019 ರ ಪ್ರವಾಹದ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಲು ಆರ್ಥಿಕ ನೆರವು ನೀಡುವ ಸಂಬಂಧ ಆದೇಶ ಹೊರಡಿಸಲಾಗಿತ್ತು. ಅದಕ್ಕೆ ಒಪ್ಪಿಗೆ ನೀಡಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ವೈದ್ಯಕೀಯ ಆಮ್ಲಜನಕ ಉತ್ಪಾದಕರಿಗೆ ವಿವಿಧ ರೀತಿಯ ಆರ್ಥಿಕ ಪ್ರೋತ್ಸಾಹ ನೀಡುವ ಯೋಜನೆಗೆ ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.</p>.<p>ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಬಸವರಾಜಬೊಮ್ಮಾಯಿ ಈ ವಿಷಯ ತಿಳಿಸಿದರು.</p>.<p>ಕೋವಿಡ್ ಸಂದರ್ಭದಲ್ಲಿ ಅಮ್ಲಜನಕದ ಕೊರತೆ ಎದುರಿಸಿದ್ದೆವು. ರಾಜ್ಟಯದಲ್ಲಿ 9 ಉತ್ಪಾದನಾ ಘಟಕಗಳಿವೆ. 815 ಮೆ.ಟನ್ ಉತ್ಪಾದನಾ ಸಾಮರ್ಥ್ಯವಿದ್ದು, 5,700 ಮೆ.ಟನ್ ದಾಸ್ತಾನು ಸಾಮರ್ಥ್ಯವಿದೆ. ಇವೆರಡನ್ನೂ ಹೆಚ್ಚಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಹೂಡಿಕೆ ಮಾಡಲು ಬರುವ ಉದ್ಯಮಿಗಳಿಗೆ ಹಲವು ರಿಯಾಯ್ತಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.</p>.<p>ಇದರಲ್ಲಿ ಹೂಡಿಕೆ ಮಾಡುವ ಉದ್ಯಮಿಗೆ ಘಟಕ ಸ್ಥಾಪನೆಗೆ ಬಂಡವಾಳ ಹೂಡುವ ವೆಚ್ಚದ ಮೇಲೆ ಶೇ 25 ರಷ್ಟು ಸಹಾಯಧನ ನೀಡಲಾಗುವುದು. ಹೂಡಿಕೆದಾರರು ಕನಿಷ್ಠ ₹10 ಕೋಟಿ ಬಂಡವಾಳ ಹೂಡಬೇಕು. ಘಟಕ ಸ್ಥಾಪಿಸಿ ಮೂರು ವರ್ಷಗಳವರೆಗೆ ವಿದ್ಯುತ್ ಮೇಲಿನ ಸುಂಕ ಶೇ100 ರಷ್ಟು ವಿನಾಯ್ತಿ ನೀಡಲಾಗುತ್ತದೆ. ವಿದ್ಯುತ್ ದರ ಪಾವತಿಯ ಮೇಲೆ ಪ್ರತಿ ಟನ್ ಆಮ್ಲಜನಕ ಉತ್ಪಾದನೆ ಮೇಲೆ ₹1000 ಸಬ್ಸಿಡಿ ನೀಡಲಾಗುವುದು. ನೋಂದಣಿ ಮತ್ತು ಮುದ್ರಾಂಕದ ಸ್ಟಾಂಪ್ ಡ್ಯೂಟಿಯಲ್ಲಿ ಶೇ 100 ರಷ್ಟು ವಿನಾಯ್ತಿ, ಭೂಪರಿವರ್ತನೆಗಾಗಿ ಪಾವತಿಸುವ ಶುಲ್ಕವನ್ನು ಶೇ 100 ರಷ್ಟು ಮರುಪಾವತಿ ಮಾಡಲು ಒಪ್ಪಿಗೆ ನೀಡಲಾಗಿದೆ ಎಂದು ಹೇಳಿದರು.</p>.<p><strong>ಬಡ್ತಿಗಾಗಿ ಸಾಮಾನ್ಯ ಹಿರಿತನ ಪಟ್ಟಿ: </strong>ಕಂದಾಯ ಇಲಾಖೆಯಲ್ಲಿ ಬಡ್ತಿಗಾಗಿ ಸಾಮಾನ್ಯ ಹಿರಿತನ ಪಟ್ಟಿ ಸಿದ್ಧಪಡಿಸಲು ಒಪ್ಪಿಗೆ ನೀಡಲಾಗಿದೆ ಎಂದು ಅವರು ಹೇಳಿದರು.</p>.<p>ಈ ಮೊದಲು ನೇರವಾಗಿ ಶೇ 30, ಎಸ್ಡಿಎಯಿಂದ ಶೇ 30 ಮತ್ತು ಗ್ರಾಮಲೆಕ್ಕಿಗರಿಂದ ಶೇ 40 ಬಡ್ತಿ ನೀಡಲಾಗುತ್ತಿತ್ತು. ಸಾಮಾನ್ಯ ಹಿರಿತನ ಪಟ್ಟಿ ಮಾಡಬೇಕು ಎಂದು ಕಂದಾಯ ಇಲಾಖೆಯ ಸಿಬ್ಬಂದಿಯ ವಿವಿಧ ಸಂಘಟನೆಗಳು ಬೇಡಿಕೆ ಮಂಡಿಸಿದ್ದವು. ಅದಕ್ಕೆ ಒಪ್ಪಿಗೆ ನೀಡಿದೇವೆ ಎಂದರು.</p>.<p>ಇದರ ಪರಿಣಾಮ 3059 ಎಸ್ಡಿಎ, 3847 ಗ್ರಾಮ ಲೆಕ್ಕಿಗ ಮತ್ತು 2400 ಎಫ್ಡಿಎ ಹುದ್ದೆಗಳ ಸಾಮಾನ್ಯ ಹಿರಿತನ ಪಟ್ಟಿ ತಯಾರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಬೊಮ್ಮಾಯಿ ಹೇಳಿದರು.</p>.<p><strong>ಇತರ ತೀರ್ಮಾನಗಳು: </strong>* ಕರ್ನಾಟಕ ರಾಜ್ಯ ಉದ್ಯೋಗ ಆಧಾರಿತ ಕೋರ್ಸ್ಗಳನ್ನು(ಜೆಒಸಿ), ಪಿಯುಸಿಗೆ ತತ್ಸಮಾನ ಎಂದು ಪರಿಗಣಿಸಲು ತೀರ್ಮಾನ</p>.<p>* 139 ಕೈದಿಗಳಿಗೆ ಸನ್ನಡತೆ ಬಿಡುಗಡೆಗೆ ಶಿಫಾರಸು</p>.<p>*ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಕಟ್ಟಡ ನಿರ್ಮಿಸಲು ₹58 ಕೋಟಿ ಆಡಳಿತಾತ್ಮಕ ಅನುಮೋದನೆ</p>.<p>*ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆಗಾಗಿ ₹31.66 ಕೋಟಿ ವೆಚ್ಚದಲ್ಲಿ ಬೆಳಗಾವಿ ಮತ್ತು ಮಂಗಳೂರಿನಲ್ಲಿ ಕಟ್ಟಡವನ್ನು ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ</p>.<p>*ಮೈಸೂರಿನ ಲಲಿತ ಮಹಲ್ ಪ್ಯಾಲೆಸ್ ಹೊಟೇಲ್ ನಿರ್ವಹಣೆ ಮತ್ತು ಮೇಲ್ವಿಚಾರಣೆಯನ್ನು ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್ ಲಿಮಿಟೆಡ್ಗೆ ನೀಡಲು ಒಪ್ಪಿಗೆ</p>.<p>* ಸಿರಗುಪ್ಪಾ ಪಟ್ಟಣಕ್ಕೆ 2500 ಎಂಎಲ್ ಸಾಮರ್ಥ್ಯದ ಜಲಾಶಯ ನಿರ್ಮಿಸಲು ಯೋಜನಾ ಪರಿಷ್ಕೃತ ವೆಚ್ಚ ₹45.46 ಕೋಟಿಗೆ ಒಪ್ಪಿಗೆ</p>.<p>* ದಾಸನಪುರ ಎಪಿಎಂಸಿ, 93 ಶಾಪ್, 54 ತಿಂಗಳ ಬಾಡಿಗೆ, ಲೀಸ್ ಕಂ ಸೇಲ್ನಲ್ಲಿ 24 ಲಕ್ಷ ಇತ್ತು, 20 ಲಕ್ಷ ಕ್ಕೆ ಇಳಿಸಬೇಕು. ತಿಂಗಳ ಬಾಡಿಗೆ 20 ಸಾವಿರ ಇದ್ದದ್ದು 15 ಸಾವಿರಕ್ಕೆ ಇಳಿಸಲಾಗಿದೆ.</p>.<p>*2019 ರ ಪ್ರವಾಹದ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಲು ಆರ್ಥಿಕ ನೆರವು ನೀಡುವ ಸಂಬಂಧ ಆದೇಶ ಹೊರಡಿಸಲಾಗಿತ್ತು. ಅದಕ್ಕೆ ಒಪ್ಪಿಗೆ ನೀಡಲಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>