ಆಡಳಿತ ಪಕ್ಷವನ್ನು ಟೀಕಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸರ್ಕಾರ ಟೇಕಾಫ್ ಆಗಿಲ್ಲ. ಮುಂದೆಯೂ ಆಗುವುದಿಲ್ಲ ಎಂದು ಕಚೇರಿಯಿಂದ ವಿಮುಖರಾದ ಸಚಿವರ ಧೋರಣೆಯೇ ಹೇಳುತ್ತಿದೆ. ಕಚೇರಿಗೆ ತೆರಳಿ ತಮ್ಮ ನೂತನ ಖಾತೆಯ ವಿವರಗಳ ಪಡೆದು, ಅಧಿಕಾರಿಗಳೊಂದಿಗೆ ಚರ್ಚಿಸಿ, ಆಗಬೇಕಾದ ಕೆಲಸಗಳತ್ತ ಗಮನಿಸಬೇಕು’ ಎಂದು ಆಗ್ರಹಿಸಿದೆ.