<p><strong>ಬೆಂಗಳೂರು:</strong> ಇದೇ 13 ರಂದು ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ ಬೆನ್ನಲ್ಲೇ ಸಚಿವಾಕಾಂಕ್ಷಿ ಶಾಸಕರ ಚಟುವಟಿಕೆ ಗರಿಗೆದರಿದೆ. ಸೋಮವಾರ ಸಂಜೆ ಸಂಭಾವ್ಯ ಸಚಿವರ ಪಟ್ಟಿ ಬಿಡುಗಡೆ ಆಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.</p>.<p>ಬುಧವಾರ (ಜ.13) ಸಂಜೆ ಸಂಪುಟ ವಿಸ್ತರಣೆ ನಡೆಯಲಿದ್ದು, ರಾಜ್ಯಪಾಲರಿಗೆ ಮಂಗಳವಾರ (ಜ.12) ಮಾಹಿತಿ ನೀಡಲು ತೀರ್ಮಾನಿಸಲಾಗಿದೆ. ಪ್ರಮಾಣ ಸ್ವೀಕರಿಸಲಿರುವವರ ಪಟ್ಟಿಯೂ ಬಿಡುಗಡೆ ಆಗುವ ಸಾಧ್ಯತೆ ಇದೆ. ಇಬ್ಬರು ಸಚಿವರನ್ನು ಕೈಬಿಡುವ ಸಾಧ್ಯತೆ ದಟ್ಟವಾಗಿದೆ.</p>.<p>ಸೋಮವಾರ ಬೆಳಿಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ , ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಅವರಿಗೆ ಅನುಕೂಲಕರ ದಿನ ನೋಡಿಕೊಂಡು ದಿನ ಅಂತಿಗೊಳಿಸುತ್ತೇನೆ' ಎಂದು ಹೇಳಿದರು.</p>.<p>’ಸಂಪುಟ ವಿಸ್ತರಣೆಯೇ ಪುನರ್ ರಚನೆಯೇ’ ಎಂಬ ಪ್ರಶ್ನೆಗೆ, 'ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೋಡೋಣ ಎರಡೂ ಗೊತ್ತಾಗುತ್ತದೆ' ಎಂದಷ್ಟೆ ಹೇಳಿದರು. ದೆಹಲಿ ಮೂಲಗಳ ಪ್ರಕಾರ, ಇದೇ 13 ರಂದು ನಡ್ಡಾ ಅವರ ಅಸ್ಸಾಂ ಪ್ರವಾಸದಲ್ಲಿರುವ ಸಾಧ್ಯತೆ ಇದೆ.</p>.<p><strong>ಪಟ್ಟಿಯಲ್ಲಿ ಕೆಲವು ಬದಲಾವಣೆ:</strong> ಈಗಾಗಲೇ ಸಿದ್ಧವಾಗಿರುವ ಪಟ್ಟಿಯಲ್ಲಿ ಒಂದೆರಡು ಹೆಸರುಗಳು ಬದಲಾವಣೆ ಆಗುವ ಸಾಧ್ಯತೆ ಇದೆ. ಹೀಗಾಗಿ ಪಟ್ಟಿ ಕೊನೇ ಕ್ಷಣದಲ್ಲಿ ಬಹಿರಂಗಪಡಿಸಬಹುದು. ಪಕ್ಷದ ಕೋಟಾದಲ್ಲಿ ವರಿಷ್ಠರು ಸೂಚಿಸುವ ಹೆಸರುಗಳನ್ನು ಸೇರಿಸಬೇಕಾಗಬಹುದು. ಆರು ಶಾಸಕರ ಹೆಸರು ಅಂತಿಮಗೊಳಿಸಲಾಗಿದೆ ಎಂದೂ ಮೂಲಗಳು ಹೇಳಿವೆ.</p>.<p>ಮೂವರು ವಲಸಿಗರನ್ನು ಸೇರಿಸಿಕೊಂಡ ನಂತರ ಉಳಿಯುವ ನಾಲ್ಕು ಸ್ಥಾನಗಳಲ್ಲಿ ಅವಕಾಶ ಗಿಟ್ಟಿಸಲು ಮೂಲ ಬಿಜೆಪಿ ಶಾಸಕರಲ್ಲಿ ಪೈಪೋಟಿ ಹೆಚ್ಚಾಗಿದೆ. ಸಂಪುಟದಲ್ಲಿ ಉಮೇಶ ಕತ್ತಿಯವರಿಗೆ ಸ್ಥಾನ ನೀಡಿದರೆ, ಬೆಳಗಾವಿ ಜಿಲ್ಲೆಗೆ ಅತ್ಯಧಿಕ<br />ಪ್ರಾತಿನಿಧ್ಯ ನೀಡಿದಂತಾಗುತ್ತದೆ. ಹೀಗಾಗಿ ಸಚಿವೆ ಶಶಿಕಲಾ ಜೊಲ್ಲೆಯವರನ್ನು ಕೈಬಿಡಬಹುದು ಎಂಬ ಮಾತೂ ಕೇಳಿ ಬರುತ್ತಿದೆ. ಜೊಲ್ಲೆ ಕೈಬಿಟ್ಟರೆ ಮಹಿಳೆಯೊಬ್ಬರಿಗೆ ಅವಕಾಶ ನೀಡಬೇಕಾಗುತ್ತದೆ, ಆದ್ದರಿಂದ ಕಾರವಾರ ಶಾಸಕಿ ರೂಪಾಲಿ ನಾಯ್ಕ ಮತ್ತು ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಹೆಸರುಗಳು ಚಲಾವಣೆಗೆ ಬಂದಿವೆ.</p>.<p>ಮುನಿರತ್ನ ಮತ್ತು ಅರವಿಂದ ಲಿಂಬಾವಳಿ ಅವರಿಗೆ ಅವಕಾಶ ನೀಡಿದರೆ ಬೆಂಗಳೂರಿಗೆ ಪ್ರಾತಿನಿಧ್ಯ ಹೆಚ್ಚಾಗುತ್ತದೆ. ಆಗ ನಗರದಿಂದ ಸಚಿವರಾದವರಲ್ಲಿ ಯಾರಾದರೂ ಒಬ್ಬರನ್ನು ಕೈಬಿಡಬೇಕಾಗಬಹುದು ಎಂದು ಮೂಲಗಳು ಹೇಳಿವೆ.</p>.<p>ಸಚಿವ ಸಂಪುಟ ವಿಸ್ತರಣೆ ಬಳಿಕ ಮುಖ್ಯಮಂತ್ರಿ ತಮ್ಮ ಬಳಿ ಇರುವ ಹೆಚ್ಚುವರಿ ಖಾತೆಗಳನ್ನು ಹಂಚಿಕೆ ಮಾಡಬೇಕಾಗುತ್ತದೆ. ಇದರಿಂದಾಗಿ ಕೆಲವು ಸಚಿವರ ಖಾತೆಗಳೂ ಬದಲಾಗಬಹುದು ಎಂದು ಹೇಳಲಾಗಿದೆ.</p>.<p><strong>‘ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದೇನೆ’</strong></p>.<p>'ಕಷ್ಟ ಕಾಲದಲ್ಲಿ ಯಡಿಯೂರಪ್ಪ ಅವರ ಕೈ ಹಿಡಿದಿದ್ದೇನೆ. ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ' ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದರು.</p>.<p>ಸುದ್ದಿಗಾರರ ಮಾತನಾಡಿದ ಅವರು, 'ನನ್ನನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಮೈತ್ರಿ ಸರ್ಕಾರದಲ್ಲಿ ನಾನು ಸಚಿವನಾಗಿದ್ದೆ. ಮೊದಲು ರಾಜೀನಾಮೆ ನೀಡಿ ಬಂದವನೇ ನಾನು. ಆ ಬಳಿಕ, ಆರ್. ಶಂಕರ್ ಎಲ್ಲರೂ ರಾಜೀನಾಮೆ ನೀಡಿ ಬಂದಿದ್ದಾರೆ' ಎಂದರು.</p>.<p>'ಅವಧಿ ಪೂರ್ಣವಾಗುವವರೆಗೂ ಸಚಿವರಾಗಿ ಇರುತ್ತೀರಾ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕಷ್ಟ ಕಾಲದಲ್ಲಿ ನಾನು ಈ ಸರ್ಕಾರ ರಚನೆಗೆ ಬಂದಿದ್ದೇನೆ. ಹೀಗಾಗಿ, ಮುಖ್ಯಮಂತ್ರಿ ಮಾತು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ. ಒಂದು ವೇಳೆ ಕೈ ಬಿಡುವ ಸಂದರ್ಭ ಬಂದಲ್ಲಿ ಆಗ ತೀರ್ಮಾನ ಮಾಡುತ್ತೇನೆ. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಇದೇ 13 ರಂದು ಸಚಿವ ಸಂಪುಟ ವಿಸ್ತರಣೆ ಆಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದ ಬೆನ್ನಲ್ಲೇ ಸಚಿವಾಕಾಂಕ್ಷಿ ಶಾಸಕರ ಚಟುವಟಿಕೆ ಗರಿಗೆದರಿದೆ. ಸೋಮವಾರ ಸಂಜೆ ಸಂಭಾವ್ಯ ಸಚಿವರ ಪಟ್ಟಿ ಬಿಡುಗಡೆ ಆಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.</p>.<p>ಬುಧವಾರ (ಜ.13) ಸಂಜೆ ಸಂಪುಟ ವಿಸ್ತರಣೆ ನಡೆಯಲಿದ್ದು, ರಾಜ್ಯಪಾಲರಿಗೆ ಮಂಗಳವಾರ (ಜ.12) ಮಾಹಿತಿ ನೀಡಲು ತೀರ್ಮಾನಿಸಲಾಗಿದೆ. ಪ್ರಮಾಣ ಸ್ವೀಕರಿಸಲಿರುವವರ ಪಟ್ಟಿಯೂ ಬಿಡುಗಡೆ ಆಗುವ ಸಾಧ್ಯತೆ ಇದೆ. ಇಬ್ಬರು ಸಚಿವರನ್ನು ಕೈಬಿಡುವ ಸಾಧ್ಯತೆ ದಟ್ಟವಾಗಿದೆ.</p>.<p>ಸೋಮವಾರ ಬೆಳಿಗ್ಗೆ ಸುದ್ದಿಗಾರರ ಜತೆ ಮಾತನಾಡಿದ ಯಡಿಯೂರಪ್ಪ , ‘ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಮಾಣ ವಚನ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಅವರಿಗೆ ಅನುಕೂಲಕರ ದಿನ ನೋಡಿಕೊಂಡು ದಿನ ಅಂತಿಗೊಳಿಸುತ್ತೇನೆ' ಎಂದು ಹೇಳಿದರು.</p>.<p>’ಸಂಪುಟ ವಿಸ್ತರಣೆಯೇ ಪುನರ್ ರಚನೆಯೇ’ ಎಂಬ ಪ್ರಶ್ನೆಗೆ, 'ಏಳು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೋಡೋಣ ಎರಡೂ ಗೊತ್ತಾಗುತ್ತದೆ' ಎಂದಷ್ಟೆ ಹೇಳಿದರು. ದೆಹಲಿ ಮೂಲಗಳ ಪ್ರಕಾರ, ಇದೇ 13 ರಂದು ನಡ್ಡಾ ಅವರ ಅಸ್ಸಾಂ ಪ್ರವಾಸದಲ್ಲಿರುವ ಸಾಧ್ಯತೆ ಇದೆ.</p>.<p><strong>ಪಟ್ಟಿಯಲ್ಲಿ ಕೆಲವು ಬದಲಾವಣೆ:</strong> ಈಗಾಗಲೇ ಸಿದ್ಧವಾಗಿರುವ ಪಟ್ಟಿಯಲ್ಲಿ ಒಂದೆರಡು ಹೆಸರುಗಳು ಬದಲಾವಣೆ ಆಗುವ ಸಾಧ್ಯತೆ ಇದೆ. ಹೀಗಾಗಿ ಪಟ್ಟಿ ಕೊನೇ ಕ್ಷಣದಲ್ಲಿ ಬಹಿರಂಗಪಡಿಸಬಹುದು. ಪಕ್ಷದ ಕೋಟಾದಲ್ಲಿ ವರಿಷ್ಠರು ಸೂಚಿಸುವ ಹೆಸರುಗಳನ್ನು ಸೇರಿಸಬೇಕಾಗಬಹುದು. ಆರು ಶಾಸಕರ ಹೆಸರು ಅಂತಿಮಗೊಳಿಸಲಾಗಿದೆ ಎಂದೂ ಮೂಲಗಳು ಹೇಳಿವೆ.</p>.<p>ಮೂವರು ವಲಸಿಗರನ್ನು ಸೇರಿಸಿಕೊಂಡ ನಂತರ ಉಳಿಯುವ ನಾಲ್ಕು ಸ್ಥಾನಗಳಲ್ಲಿ ಅವಕಾಶ ಗಿಟ್ಟಿಸಲು ಮೂಲ ಬಿಜೆಪಿ ಶಾಸಕರಲ್ಲಿ ಪೈಪೋಟಿ ಹೆಚ್ಚಾಗಿದೆ. ಸಂಪುಟದಲ್ಲಿ ಉಮೇಶ ಕತ್ತಿಯವರಿಗೆ ಸ್ಥಾನ ನೀಡಿದರೆ, ಬೆಳಗಾವಿ ಜಿಲ್ಲೆಗೆ ಅತ್ಯಧಿಕ<br />ಪ್ರಾತಿನಿಧ್ಯ ನೀಡಿದಂತಾಗುತ್ತದೆ. ಹೀಗಾಗಿ ಸಚಿವೆ ಶಶಿಕಲಾ ಜೊಲ್ಲೆಯವರನ್ನು ಕೈಬಿಡಬಹುದು ಎಂಬ ಮಾತೂ ಕೇಳಿ ಬರುತ್ತಿದೆ. ಜೊಲ್ಲೆ ಕೈಬಿಟ್ಟರೆ ಮಹಿಳೆಯೊಬ್ಬರಿಗೆ ಅವಕಾಶ ನೀಡಬೇಕಾಗುತ್ತದೆ, ಆದ್ದರಿಂದ ಕಾರವಾರ ಶಾಸಕಿ ರೂಪಾಲಿ ನಾಯ್ಕ ಮತ್ತು ಹಿರಿಯೂರು ಶಾಸಕಿ ಪೂರ್ಣಿಮಾ ಅವರ ಹೆಸರುಗಳು ಚಲಾವಣೆಗೆ ಬಂದಿವೆ.</p>.<p>ಮುನಿರತ್ನ ಮತ್ತು ಅರವಿಂದ ಲಿಂಬಾವಳಿ ಅವರಿಗೆ ಅವಕಾಶ ನೀಡಿದರೆ ಬೆಂಗಳೂರಿಗೆ ಪ್ರಾತಿನಿಧ್ಯ ಹೆಚ್ಚಾಗುತ್ತದೆ. ಆಗ ನಗರದಿಂದ ಸಚಿವರಾದವರಲ್ಲಿ ಯಾರಾದರೂ ಒಬ್ಬರನ್ನು ಕೈಬಿಡಬೇಕಾಗಬಹುದು ಎಂದು ಮೂಲಗಳು ಹೇಳಿವೆ.</p>.<p>ಸಚಿವ ಸಂಪುಟ ವಿಸ್ತರಣೆ ಬಳಿಕ ಮುಖ್ಯಮಂತ್ರಿ ತಮ್ಮ ಬಳಿ ಇರುವ ಹೆಚ್ಚುವರಿ ಖಾತೆಗಳನ್ನು ಹಂಚಿಕೆ ಮಾಡಬೇಕಾಗುತ್ತದೆ. ಇದರಿಂದಾಗಿ ಕೆಲವು ಸಚಿವರ ಖಾತೆಗಳೂ ಬದಲಾಗಬಹುದು ಎಂದು ಹೇಳಲಾಗಿದೆ.</p>.<p><strong>‘ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದೇನೆ’</strong></p>.<p>'ಕಷ್ಟ ಕಾಲದಲ್ಲಿ ಯಡಿಯೂರಪ್ಪ ಅವರ ಕೈ ಹಿಡಿದಿದ್ದೇನೆ. ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲ ಎಂಬ ವಿಶ್ವಾಸವಿದೆ' ಎಂದು ಅಬಕಾರಿ ಸಚಿವ ಎಚ್. ನಾಗೇಶ್ ಹೇಳಿದರು.</p>.<p>ಸುದ್ದಿಗಾರರ ಮಾತನಾಡಿದ ಅವರು, 'ನನ್ನನ್ನು ಸಂಪುಟದಿಂದ ಕೈಬಿಡುವ ಬಗ್ಗೆ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಮೈತ್ರಿ ಸರ್ಕಾರದಲ್ಲಿ ನಾನು ಸಚಿವನಾಗಿದ್ದೆ. ಮೊದಲು ರಾಜೀನಾಮೆ ನೀಡಿ ಬಂದವನೇ ನಾನು. ಆ ಬಳಿಕ, ಆರ್. ಶಂಕರ್ ಎಲ್ಲರೂ ರಾಜೀನಾಮೆ ನೀಡಿ ಬಂದಿದ್ದಾರೆ' ಎಂದರು.</p>.<p>'ಅವಧಿ ಪೂರ್ಣವಾಗುವವರೆಗೂ ಸಚಿವರಾಗಿ ಇರುತ್ತೀರಾ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಕಷ್ಟ ಕಾಲದಲ್ಲಿ ನಾನು ಈ ಸರ್ಕಾರ ರಚನೆಗೆ ಬಂದಿದ್ದೇನೆ. ಹೀಗಾಗಿ, ಮುಖ್ಯಮಂತ್ರಿ ಮಾತು ಉಳಿಸಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ. ಒಂದು ವೇಳೆ ಕೈ ಬಿಡುವ ಸಂದರ್ಭ ಬಂದಲ್ಲಿ ಆಗ ತೀರ್ಮಾನ ಮಾಡುತ್ತೇನೆ. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>