‘ಉಪ ಚುನಾವಣೆ, ವಿಧಾನ ಪರಿಷತ್, ಗ್ರಾಮ ಪಂಚಾಯಿತಿ ಚುನಾವಣೆಗಳು ಮುಗಿದಿವೆ. ಎಲ್ಲ ಚುನಾವಣೆಗಳಲ್ಲೂ ಪಕ್ಷಕ್ಕೆ ಗೆಲುವು ದೊರಕಿದೆ. ಸಂಪುಟ ವಿಸ್ತರಣೆಗೆ ಶಾಸಕರಿಂದ ಒತ್ತಡ ಹೆಚ್ಚುತ್ತಿದೆ. ತಕ್ಷಣವೇ ಸಂಪುಟ ವಿಸ್ತರಣೆಗೆ ಅನುಮತಿ ನೀಡುವಂತೆ ವರಿಷ್ಠರ ಮನವೊಲಿಸಿ’ ಎಂಬುದಾಗಿ ಯಡಿಯೂರಪ್ಪ ಅವರು ಸಿಂಗ್ ಅವರಿಗೆ ಮನವಿ ಮಾಡಿದರು ಎಂದು ಮೂಲಗಳು ಹೇಳಿವೆ.