ಸಚಿವ ಸಂಪುಟ ವಿಸ್ತರಣೆಗೆ ಮುನ್ನ ಅರುಣ್ಸಿಂಗ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆಗೆ ಮಾತುಕತೆ ನಡೆಸಿ, ಪಕ್ಷದ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಕ್ಷದಲ್ಲಿ ಎಲ್ಲ ಶಾಸಕರೂ ಸಚಿವರಾಗುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಆದರೆ ಎಲ್ಲರನ್ನೂ ಸಚಿವರನ್ನಾಗಿ ಮಾಡಲು ಸಾಧ್ಯವಾಗುವುದಿಲ್ಲ ಎಂದರು.