ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಸಂಪುಟ ಸಭೆ ಒಪ್ಪಿಗೆ

Last Updated 12 ಮೇ 2022, 10:48 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುವ ಪ್ರಸ್ತಾವಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

2021ರ ಡಿಸೆಂಬರ್‌ನಲ್ಲಿಬೆಳಗಾವಿಯಲ್ಲಿ ನಡೆದ ವಿಧಾನಮಂಡಲ‌ ಅಧಿವೇಶನದಲ್ಲಿ ಈ ಮಸೂದೆಯನ್ನು ಸಿದ್ಧಪಡಿಸಲಾಗಿತ್ತು. ವಿಧಾನಸಭೆಯ ಒಪ್ಪಿಗೆ ದೊರಕಿದ್ದ ಮಸೂದೆಯನ್ನು ವಿಧಾನ ಪರಿಷತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಈಗ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ.

ಸಂಪುಟ ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ, ಸುಗ್ರೀವಾಜ್ಞೆ ರೂಪದಲ್ಲಿ ಮತಾಂತರ ನಿಷೇಧ ಮಸೂದೆ ಜಾರಿಗೆ ಬರಲಿದೆ. ವಿಧಾನಮಂಡಲದ ಮುಂಬರುವ ಅಧಿವೇಶನದಲ್ಲಿ ಮಸೂದೆಗೆ ವಿಧಾನ ಪರಿಷತ್ ಒಪ್ಪಿಗೆ ಪಡೆಯಲಾಗುವುದು ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT