'ಅಧಿಕಾರ ವಿಕೇಂದ್ರೀಕರಣ ಸಂದರ್ಭದಲ್ಲಿ ಹಲವು ವಿದ್ಯಾವಂತರು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಶೇ 95ರಷ್ಟು ಸ್ಥಾನ ಗಳಲ್ಲಿ ಗೆಲ್ಲೋದು ನೂರಕ್ಕೆ ನೂರು ನಿಶ್ಚಿತ. ಚುನಾವಣೆಯಲ್ಲಿ ಕಾಂಗ್ರೆಸ್ ನ ಯಾವುದೇ ನಾಯಕರು ಆಸಕ್ತಿ ವಹಿಸಿರಲಿಲ್ಲ. ಮುಂದೆ ಗ್ರಾಮ ಪಂಚಾಯ್ತಿಗೆ ಆಯ್ಕೆಯಾಗುವ ಸದಸ್ಯರಿಗೆ ಹೆಚ್ಚಿನ ಶಕ್ತಿ ತುಂಬುವ ಕೆಲಸ ಮಾಡ್ತೇವೆ. ಗ್ರಾಮಗಳ ಅಭಿವೃದ್ಧಿ ಮಾಡಲು ಸದಸ್ಯರಿಗೆ ಸಹಕಾರ ಕೊಡಲು ಪ್ರಾಮಾಣಿಕ ಕೆಲಸ ಮಾಡುತ್ತೇವೆ' ಎಂದೂ ಹೇಳಿದರು.