ಬಿಬಿಎಂಪಿ ಆಸ್ಪತ್ರೆಗಳಲ್ಲಿ ಹಾಸಿಗೆ ಬ್ಲಾಕಿಂಗ್ ದಂಧೆಯನ್ನು ಸಂಸದ ತೇಜಸ್ವಿ ಸೂರ್ಯ ಅವರು ಬಯಲಿಗೆಳೆದು ಉತ್ತಮ ಕೆಲಸ ಮಾಡಿದ್ದಾರೆ. ಅದೇ ಅಪರಾಧ ಎಂದು ಭಾವಿಸಿರುವ ಶಾಸಕ ಜಮೀರ್ ಅಹಮದ್ ಖಾನ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಲ್ಲಿ ಏನು ನಡೆಯುತ್ತಿದೆಯೊ ಅದನ್ನು ಬಯಲಿಗೆಳೆದಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.