LIVE– ಬಿಎಸ್ವೈ ರಾಜೀನಾಮೆ | ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್
LIVE
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಚರ್ಚೆಯನ್ನು ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಅಧಿಕೃತಗೊಳಿಸಿದೆ. ಸಿಎಂ ಸ್ಥಾನಕ್ಕೆ ಬಿಎಸ್ವೈ ರಾಜೀನಾಮೆ ಘೋಷಣೆಯೊಂದಿಗೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತೆ ಚುರುಕುಗೊಂಡಿದೆ. ರಾಜ್ಯ ರಾಜಕೀಯದ ಇಂದಿನ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯ.
ಸಂಸದೀಯ ಮಂಡಳಿ ಸಭೆಯಲ್ಲಿ ಮುಂದಿನ ಸಿಎಂ ಕುರಿತು ತೀರ್ಮಾನ: ಅರುಣ್ ಸಿಂಗ್
08:4226 Jul 2021
ಸಿಎಂ ಬದಲಾವಣೆಯಿಂದ ರಾಜ್ಯಕ್ಕೆ ಪ್ರಯೋಜನವಿಲ್ಲ: ಸಿದ್ದರಾಮಯ್ಯ
08:1126 Jul 2021
ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜ್ಯದ ನಾಯಕತ್ವ ಬದಲಾವಣೆ ಪ್ರಹಸನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಮೂಲಕ ತೆರೆಬಿದ್ದಿದೆ. ಇದೀಗ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಶುರುವಾಗಿದೆ.