ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ: ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌

Last Updated 11 ಜೂನ್ 2021, 13:40 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ, ಬಿ.ಎಸ್‌.ಯಡಿಯೂರಪ್ಪ ಅವರು ಆ ಕುರ್ಚಿಯಲ್ಲಿ ಇದ್ದಾರೆ’ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಉತ್ತರಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಪ್ರಧಾನ ಕಾರ್ಯದರ್ಶಿಯೂ ಅದನ್ನೇ ಹೇಳಿದ್ದಾರೆ. ಹೀಗಾಗಿ, ಆ ವಿಷಯದ ಬಗ್ಗೆ ಮಾತನಾಡುವುದೇ ಅಪ್ರಸ್ತುತ’ ಎಂದು ಪ್ರತಿಕ್ರಿಯಿಸಿದರು.

‘ಸರ್ಕಾರವು ಜನಜೀವನ, ಜೀವ ಉಳಿಸುವಿಕೆ ಇವೆರಡನ್ನು ಸಮತೋಲನದಿಂದ ಪರಿಗಣಿಸುತ್ತಿದೆ. ಕೋವಿಡ್‌ ದೃಢ ಪ್ರಮಾಣ ಶೇ 5ಕ್ಕಿಂತ ಕಡಿಮೆ ಇರುವ ಕಡೆಗಳಲ್ಲಿ ಹಂತಹಂತವಾಗಿ ಲಾಕ್‌ಡೌನ್‌ ಸಡಿಲಿಕೆಗೆ ಕ್ರಮ ವಹಿಸುತ್ತೇವೆ. ಪ್ರಮಾಣ ಜಾಸ್ತಿ ಇರುವ ಕಡೆಗಳಲ್ಲಿ ಕಠಿಣ ಕ್ರಮಗಳು ಮುಂದುವರಿಯಲಿವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT