ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಆದಷ್ಟು ಜನರ ಬಳಿ ತೆರಳಿ ಕಾರ್ಯನಿರ್ವಹಿಸಬೇಕು. ಜನರು ಜಿಲ್ಲಾಧಿಕಾರಿ ಕಚೇರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಾರದಂತೆ ಮಾಡಬೇಕು. ಜನರ ಬಳಿಗೇ ಜಿಲ್ಲಾಧಿಕಾರಿಗಳು ತೆರಳುವಂತಾಗಬೇಕು. ಕಂದಾಯ ಸಚಿವರೇ ಜನರ ಬಳಿ ತೆರಳಿ, ಅವರ ಸಮಸ್ಯೆ ಆಲಿಸಿ ಅವುಗಳನ್ನು ಬಗೆಹರಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳೂ ಇದೇ ಹಾದಿ ಅನುಸರಿಸಬೇಕು ಎಂದು ಸೂಚನೆ ನೀಡಿರುವುದಾಗಿ ತಿಳಿಸಿದರು.