ಶನಿವಾರ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಈಗಾಗಲೇ ಪೊಲೀಸ್ ಹಿರಿಯ ಅಧಿಕಾರಿಗಳಿಗೆ ತುರ್ತು ಕ್ರಮ ಕೈಗೊಂಡು ಕಟ್ಟೆಚ್ಚರದಿಂದ ಇರಲು ಸೂಚಿಸಲಾಗಿದೆ. ರಾಜ್ಯದಲ್ಲಿ ಪರಿಸ್ಥಿತಿ ಶಾಂತವಾಗಿದ್ದು ನಿಯಂತ್ರಣದಲ್ಲಿದೆ. ಆದರೂ ಜಾಗೃತವಾಗಿರಬೇಕೆಂದು ತಿಳಿಸಲಾಗಿದೆ. ಪ್ರತಿಯೊಂದು ಠಾಣೆಯ ಸಿಪಿಐ ಅವರನ್ನು ಉಸ್ತುವಾರಿ ಮಾಡಿ, ಎಲ್ಲ ಸಮುದಾಯದವರ ಜತೆ ಸೌಹಾರ್ದಯುತ ವಾತಾವರಣ ನಿರ್ಮಿಸುವಂತೆ ಸೂಚಿಸಲಾಗಿದೆ. ಹುಧಾ ಪೊಲೀಸ್ ಕಮಿಷನರ್ ಹಾಗೂ ಧಾರವಾಡ ಎಸ್ಪಿ ಜೊತೆಯೂ ಈ ಕುರಿತು ಚರ್ಚಿಸಿದ್ದೇನೆ’ ಎಂದರು.