<p><strong>ಬೆಂಗಳೂರು: </strong>ಮತದಾರರ ಮಾಹಿತಿ ಸಂಗ್ರಹದಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪವನ್ನು ಮುಖ್ಯಮಂತ್ರಿ</p>.<p>ತಳ್ಳಿ ಹಾಕಿದ್ದಾರೆ.</p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹವಾಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ಕಾಂಗ್ರೆಸ್ಸಿಗರ ವೈಚಾರಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಮತದಾರರ ಮಾಹಿತಿಯನ್ನು ಎನ್ಜಿಒಗಳು ದುರ್ಬಳಕೆ ಮಾಡಿದ್ದಲ್ಲಿ ಅದರ ಸಮಗ್ರ ತನಿಖೆಗೆ ಆದೇಶಿಸುತ್ತೇನೆ’ ಎಂದು ಹೇಳಿದರು.</p>.<p><strong>ಕಾಂಗ್ರೆಸ್ ಆರೋಪವೇನು?</strong><br />ಮತದಾರರ ಜಾಗೃತಿ ಹೆಸರಲ್ಲಿ ಮತದಾರರ ಡಾಟಾ ಕಳ್ಳತನಕ್ಕೆ ಇಳಿದಿರುವ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹೈಜಾಕ್ ಮಾಡಲು ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ನೀಡಿರುವ ಅನುಮತಿ ಪತ್ರದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಇರಬಾರದು ಎಂದಿದೆ. ಆದರೆ, ಸಂಸ್ಥೆಯ ಮುಖ್ಯಸ್ಥ ಬಿಜೆಪಿ ಸಚಿವರ ಆಪ್ತನಾಗಿರುವುದನ್ನು ಬಿಜೆಪಿ ಸರ್ಕಾರ ಮುಚ್ಚಿಟ್ಟಿದೆ ಎಂದು ಕಾಂಗ್ರೆಸ್ ದೂರಿದೆ. </p>.<p>ಮತದಾರರ ಜಾಗೃತಿ ಕಾರ್ಯಕ್ರಮವನ್ನು ಉಚಿತವಾಗಿ ಮಾಡುತ್ತೇವೆ ಎಂದು ಚಿಲುಮೆ ಸಂಸ್ಥೆ ಹೇಳಿಕೊಂಡಿದೆ. ಆದರೆ ಆ ಕಾರ್ಯಕ್ರಮಕ್ಕೆ ದಿನಕ್ಕೆ ₹1,500 ವೇತನ ನೀಡಿ ಬಿಜೆಪಿ ಕಾರ್ಯಕರ್ತರನ್ನೇ ಬೂತ್ ಲೆವೆಲ್ ಆಫೀಸರ್ಗಳೆಂದು ನೇಮಿಸುತ್ತಿದೆ. ಉಚಿತವಾಗಿ ಕೆಲಸ ಮಾಡುವವರಿಗೆ ದುಬಾರಿ ವೇತನ ನೀಡುತ್ತಾರೆಂದರೆ ಅವರ ‘ಲಾಭಾಂಶ’ ಯಾವುದು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p><strong>ಇವನ್ನೂ ಓದಿ...</strong></p>.<p><a href="https://www.prajavani.net/karnataka-news/congress-demand-for-arrest-of-karnataka-cm-basavaraj-bommai-for-electoral-fraud-989335.html" target="_blank">ಮತದಾರರ ಜಾಗೃತಿ ಹೆಸರಲ್ಲಿ ಬಿಜೆಪಿಯಿಂದ ಡಾಟಾ ಕಳ್ಳತನ: ಕಾಂಗ್ರೆಸ್</a></p>.<p><a href="https://www.prajavani.net/karnataka-news/congress-leader-randeep-singh-surjewala-urges-to-arrest-of-cm-bommai-on-voters-details-sharing-case-989312.html" target="_blank">ಖಾಸಗಿ ಸಂಸ್ಥೆಗೆ ಮತದಾರರ ಮಾಹಿತಿ: ಸಿಎಂ ಬೊಮ್ಮಾಯಿ ಬಂಧನವಾಗಬೇಕು-ಸುರ್ಜೇವಾಲ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮತದಾರರ ಮಾಹಿತಿ ಸಂಗ್ರಹದಲ್ಲಿ ಅಕ್ರಮ ನಡೆದಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪವನ್ನು ಮುಖ್ಯಮಂತ್ರಿ</p>.<p>ತಳ್ಳಿ ಹಾಕಿದ್ದಾರೆ.</p>.<p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಕ್ರಮವಾಗಿ ಮತದಾರರ ಮಾಹಿತಿ ಸಂಗ್ರಹವಾಗಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಇದು ಕಾಂಗ್ರೆಸ್ಸಿಗರ ವೈಚಾರಿಕ ದಿವಾಳಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದರು.</p>.<p>‘ಮತದಾರರ ಮಾಹಿತಿಯನ್ನು ಎನ್ಜಿಒಗಳು ದುರ್ಬಳಕೆ ಮಾಡಿದ್ದಲ್ಲಿ ಅದರ ಸಮಗ್ರ ತನಿಖೆಗೆ ಆದೇಶಿಸುತ್ತೇನೆ’ ಎಂದು ಹೇಳಿದರು.</p>.<p><strong>ಕಾಂಗ್ರೆಸ್ ಆರೋಪವೇನು?</strong><br />ಮತದಾರರ ಜಾಗೃತಿ ಹೆಸರಲ್ಲಿ ಮತದಾರರ ಡಾಟಾ ಕಳ್ಳತನಕ್ಕೆ ಇಳಿದಿರುವ ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹೈಜಾಕ್ ಮಾಡಲು ಮುಂದಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.</p>.<p>ಬಿಬಿಎಂಪಿ ವ್ಯಾಪ್ತಿಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಕ್ಕೆ ನೀಡಿರುವ ಅನುಮತಿ ಪತ್ರದಲ್ಲಿ ರಾಜಕೀಯ ಪಕ್ಷಗಳೊಂದಿಗೆ ಸಂಬಂಧ ಇರಬಾರದು ಎಂದಿದೆ. ಆದರೆ, ಸಂಸ್ಥೆಯ ಮುಖ್ಯಸ್ಥ ಬಿಜೆಪಿ ಸಚಿವರ ಆಪ್ತನಾಗಿರುವುದನ್ನು ಬಿಜೆಪಿ ಸರ್ಕಾರ ಮುಚ್ಚಿಟ್ಟಿದೆ ಎಂದು ಕಾಂಗ್ರೆಸ್ ದೂರಿದೆ. </p>.<p>ಮತದಾರರ ಜಾಗೃತಿ ಕಾರ್ಯಕ್ರಮವನ್ನು ಉಚಿತವಾಗಿ ಮಾಡುತ್ತೇವೆ ಎಂದು ಚಿಲುಮೆ ಸಂಸ್ಥೆ ಹೇಳಿಕೊಂಡಿದೆ. ಆದರೆ ಆ ಕಾರ್ಯಕ್ರಮಕ್ಕೆ ದಿನಕ್ಕೆ ₹1,500 ವೇತನ ನೀಡಿ ಬಿಜೆಪಿ ಕಾರ್ಯಕರ್ತರನ್ನೇ ಬೂತ್ ಲೆವೆಲ್ ಆಫೀಸರ್ಗಳೆಂದು ನೇಮಿಸುತ್ತಿದೆ. ಉಚಿತವಾಗಿ ಕೆಲಸ ಮಾಡುವವರಿಗೆ ದುಬಾರಿ ವೇತನ ನೀಡುತ್ತಾರೆಂದರೆ ಅವರ ‘ಲಾಭಾಂಶ’ ಯಾವುದು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.</p>.<p><strong>ಇವನ್ನೂ ಓದಿ...</strong></p>.<p><a href="https://www.prajavani.net/karnataka-news/congress-demand-for-arrest-of-karnataka-cm-basavaraj-bommai-for-electoral-fraud-989335.html" target="_blank">ಮತದಾರರ ಜಾಗೃತಿ ಹೆಸರಲ್ಲಿ ಬಿಜೆಪಿಯಿಂದ ಡಾಟಾ ಕಳ್ಳತನ: ಕಾಂಗ್ರೆಸ್</a></p>.<p><a href="https://www.prajavani.net/karnataka-news/congress-leader-randeep-singh-surjewala-urges-to-arrest-of-cm-bommai-on-voters-details-sharing-case-989312.html" target="_blank">ಖಾಸಗಿ ಸಂಸ್ಥೆಗೆ ಮತದಾರರ ಮಾಹಿತಿ: ಸಿಎಂ ಬೊಮ್ಮಾಯಿ ಬಂಧನವಾಗಬೇಕು-ಸುರ್ಜೇವಾಲ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>