ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶನಿವಾರ ಕೋವಿಡ್–19 ದೃಢಪಟ್ಟಿದ್ದು, ಅವರ ದೆಹಲಿ ಪ್ರವಾಸ ರದ್ದಾಗಿದೆ. ಈ ಕುರಿತು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
‘ನನಗೆ ಇಂದು ಕೋವಿಡ್-19 ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿವೆ. ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಆಜಾದಿ ಕಾ ಅಮೃತ್ ಮಹೋತ್ಸವದ ರಾಷ್ಟ್ರೀಯ ಸಮಿತಿಯ 3ನೇ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಅವರು ಶನಿವಾರ ದೆಹಲಿಗೆ ತೆರಳಬೇಕಿತ್ತು.
I have tested positive for Covid-19 with Mild symptoms and have isolated myself at home. Those who came in touch with me in last few days, kindly isolate yourself and get urself tested. My trip to Delhi stands cancelled.