ಮಾತ್ರೆ ಅದಲು ಬದಲು: ಆಸ್ಪತ್ರೆಯಿಂದ ಮನೆಗೆ ತೆರಳುವ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಂತೋಷ್, ‘ನಾನು ಆತ್ಮಹತ್ಯೆ ಮಾಡಿಕೊಳ್ಳುವನಲ್ಲ. ಮೂರು ದಿನದ ಹಿಂದೆ ಮದುವೆಯೊಂದಕ್ಕೆ ಹೋಗಿದ್ದೆ. ಅಲ್ಲಿಯ ಊಟದಿಂದ ಆರೋಗ್ಯ ಸಮಸ್ಯೆ ಆಗಿತ್ತು. ಅದಕ್ಕೆ ಸಂಬಂಧಪಟ್ಟ ಮಾತ್ರೆ ಬದಲು ಬೇರೆ ಮಾತ್ರೆ ತೆಗೆದುಕೊಂಡಿದ್ದರಿಂದ ನನ್ನ ಆರೋಗ್ಯದಲ್ಲಿ ಏರುಪೇರು ಆಗಿತ್ತು’ ಎಂದರು.