2010–11ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ ನಂತರ ನಕಲಿ ದಾಖಲೆ ಹಾಗೂ ನಕಲಿ ಸಹಿ ಬಳಸಿ ಆ ಭೂಮಿಯನ್ನು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಮ್ಮಿಂದ ಹಿಂದಕ್ಕೆ ಪಡೆದಿದ್ದಾಗಿ ಉದ್ಯಮಿ ಎ.ಅಲಂ ಪಾಷಾ ಅವರು ಆರೋಪಿಸಿದ್ದರು. ಈ ಸಂಬಂಧ ಅವರು ಲೋಕಾಯುಕ್ತದಲ್ಲಿ ಖಾಸಗಿ ದೂರು ದಾಖಲಿಸಿದ್ದರು.